ಕು. ವಿಹಾರಿಕಾ ಹೊಸಕೇರಿ ಅವರ ‘ಪ್ರವಾಸದ ಆ ದಿನಗಳು’ ಪ್ರವಾಸ ಕಥನ ಲೋಕಾರ್ಪಣೆ 

Must Read
 ಬೆಂಗಳೂರು –  ಉದಯ ಪ್ರಕಾಶನ, ಬೆಂಗಳೂರು ಇವರ ಆಶ್ರಯದಲ್ಲಿ ಕು. ವಿಹಾರಿಕಾ ಅಂಜನಾ ಹೊಸಕೇರಿ ಅವರು ಬರೆದಿರುವ ‘ಪ್ರವಾಸದ ಆ ದಿನಗಳು’ ಪ್ರವಾಸ ಕಥನ ಪುಸ್ತಕ ಲೋಕಾರ್ಪಣೆ ಸಮಾರಂಭವನ್ನು ನಗರದ ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ, ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
   “ಪ್ರವಾಸದ ಆ ದಿನಗಳು” ಪ್ರವಾಸ ಕಥನ ಗ್ರಂಥವನ್ನು ಡಾ. ಎಚ್.ಎಲ್. ಪುಷ್ಪ, ಅಧ್ಯಕ್ಷರು, ಕರ್ನಾಟಕ ಲೇಖಕಿಯರ ಸಂಘ, ಬೆಂಗಳೂರು ಇವರು ಲೋಕಾರ್ಪಣೆ ಮಾಡಿದರು.
   ಬೆಂಗಳೂರಿನ ಪ್ರೊ. ಸುಕನ್ಯಾ ಬಿ. ಮಾರುತಿ, ಖ್ಯಾತ ಕವಯಿತ್ರಿ ಮತ್ತು ನಿವೃತ್ತ ಕನ್ನಡ ಪ್ರಾಧ್ಯಾಪಕರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಡಾ. ರವಿಶಂಕರ್ ಎ.ಕೆ., ಕನ್ನಡ ಸಹಾಯಕ ಪ್ರಾಧ್ಯಾಪಕರು, ಕ್ರಿಸ್ತು ಜಯಂತಿ ಕಾಲೇಜು ಬೆಂಗಳೂರು ಇವರು ಗ್ರಂಥವನ್ನು ಕುರಿತು ಮಾತನಾಡಿದರು. ನಂತರ ಲೇಖಕಿ ಕು. ವಿಹಾರಿಕಾ ಅಂಜನಾ ಹೊಸಕೇರಿ ಅವರು ಈ ಪ್ರವಾಸ ಕಥನ ಗ್ರಂಥವನ್ನು ಕುರಿತು ತಮ್ಮ ಅನುಭವವನ್ನು ಹಂಚಿಕೊಂಡರು. ಶಾಸ್ತ್ರ ಚೂಡಾಮಣಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ, ವಿಶ್ರಾಂತ ಕುಲಪತಿ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ, ಬೆಂಗಳೂರು ಇವರು ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group