ಜಗತ್ತಿಗೆ ವೈಚಾರಿಕತೆಯ ಬೆಳಕು ನೀಡಿದ ಬಸವಣ್ಣನವರು – ಬಿ ಎನ್ ಬ್ಯಾಳಿ

Must Read

ಸವದತ್ತಿ: ಆಡು ಭಾಷೆಯಲ್ಲಿ ಸರಳವಾಗಿ ಜನರಿಗೆ ಅರ್ಥವಾಗುವಂತೆ ವಚನಗಳನ್ನು ರಚನೆ ಮಾಡಿದ ಬಸವಣ್ಣನವರು, ಸಮಾಜದಲ್ಲಿ ಹಲವಾರು ಬದಲಾವಣೆಗಳನ್ನು ತಂದರು. ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ಹೋಗಲಾಡಿಸಿದರು.ಜಗತ್ತಿಗೆ ವೈಚಾರಿಕತೆಯ ಬೆಳಕು ನೀಡಿದ ಬಸವಣ್ಣನವರು ಎಂದು ಕ್ಷೇತ್ರ ಸಮನ್ವಯಾಧಿಕಾರಿಗಳಾದ ಬಿ ಎನ್ ಬ್ಯಾಳಿ ಹೇಳಿದರು.

ಅವರು ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರ ದಲ್ಲಿ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರ ಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಗಳಾದ ವ್ಹಿ.ಎನ್.ಹಿರೇಮಠ, ವೈ.ಬಿ.ಕಡಕೋಳ, ರವಿ ನಲವಡೆ, ರಾಮಚಂದ್ರ, ಬಿ.ಎಂ.ಚಿದಾನಂದ ಬಾರ್ಕಿ ಎಚ್ ಎಲ್ ನದಾಫ, ಕುಶಾಲ್ ಮುದ್ದಾಪುರ, ಈರಪ್ಪ ಅವರಾದಿ ಮೊದಲಾದವರು ಉಪಸ್ಥಿತರಿದ್ದರು.

ಡಿ ಎಲ್ ಭಜಂತ್ರಿ. ಸ್ವಾಗತಿಸಿದರು. ವ್ಹಿ. ಸಿ. ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ವೈ ಬಿ ಕಡಕೋಳ ನಿರೂಪಿಸಿದರು. ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕ ಎಸ್ ಬಿ ಬೆಟ್ಟದ ವಂದಿಸಿದರು.

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...

More Articles Like This

error: Content is protected !!
Join WhatsApp Group