ಕವನ : ಕ್ರಾಂತಿಯೋಗಿ ಬಸವಣ್ಣ

Must Read

ಕ್ರಾಂತಿಯೋಗಿ ಬಸವಣ್ಣ

ಕೂಡಲ ಸಂಗಮದೇವನ ನಾಮವ
ಅಂಕಿತವಾಗಿ ಬಳಸುತಲಿ
ಮೂಡಿದ ಮನಸಿನ ಜಾಡ್ಯವ ಕಳೆದನು
ಭಕ್ತಿ ಭಂಡಾರಿ ಬಸವಣ್ಣ

ಕಾಯಕಯೋಗಿಯು,ನಾಯಕನೀತ
ವಚನದಿ ತತ್ವವ ಬಿತ್ತುತಲಿ
ಕಾವ್ಯದ ಹರಿವಿನ ಮೂಲಕ ಕಲ್ಯಾಣ
ಕ್ರಾಂತಿಯ ಸತ್ವವ ಸಾರುತಲಿ

ದೇವನು ಒಬ್ಬ ನಾಮಗಳನೇಕ
ಎಂದನು ಐಕ್ಯತೆ ಬೋಧಿಸುತ
ಜೀವಿಗಳೆಲ್ಲರ ಮೇಲಿರೆ ದಯವು
ಮೂಲವೆ ಧರ್ಮಕೆ ದಯೆ ಎನುತ

ಲಿಂಗದ ಮಧ್ಯೆ ಜಗತ್ ಸರ್ವಂ
ಕಾಯಕವೇ ಕೈಲಾಸವು
ಹಂಗಿನ ಅರಮನೆ ಏತಕೆ ಎನುತ
ಲಿಂಗದ ದೀಕ್ಷೆಗೆ ಮುಂದಾದ

ಅರಿವೆಂಬುದೆ ಗುರು,ಮಾತೇ ಮಾಣಿಕ್ಯ
ನುಡಿದರೆ ಲಿಂಗವು ಅಹುದೆನಲಿ
ಗುರು ಲಿಂಗ ಜಂಗಮರ ಸಂಗ ಮೇಲೆಂದ
ಬಾಗೇವಾಡಿಯ ‌ಸಿರಿ ಬಸವ.

✍️ ಶ್ರೀಮತಿ ಕಮಲಾಕ್ಷಿ ಕೌಜಲಗಿ
ಬೆಂಗಳೂರು.

2 COMMENTS

Comments are closed.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group