ಬೀದರ – ಪಾಕಿಸ್ತಾನದ ವಿರುದ್ಧ ಕೈಗೊಳ್ಳಲಾಗಿದ್ದ ಆಪರೇಷನ್ ಸಿಂಧೂರ ಯಶಸ್ವಿಯಾದ ಹಿನ್ನೆಲೆಯಲ್ಲಿ ಶಾಸಕ ಶರಣು ಸಲಗರ ನೇತೃತ್ವದಲ್ಲಿ ಬಸವಕಲ್ಯಾಣದಲ್ಲಿ ತಿರಂಗಾ ಯಾತ್ರೆ ನಡೆಯಿತು.
ನಗರದ ಪ್ರಮುಖ ರಸ್ತೆಯಲ್ಲಿ ಬೃಹತ್ ರಾಷ್ಟ್ರಧ್ವಜ ಹಿಡಿದ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ತಿರಂಗಾ ಯಾತ್ರೆ ನಡೆಸಿದರು.
ಈ ಸಂದರ್ಭದಲ್ಲಿ ಶಾಸಕ ಶರಣು ಸಲಗರ ಹಾಗೂ ಅವರ ಪತ್ನಿ ಸಾವಿತ್ರಿ ಭರ್ಜರಿ ಡಾನ್ಸ್ ಮಾಡಿ ಸಂಭ್ರಮಪಟ್ಟರು.
ವರದಿ : ನಂದಕುಮಾರ ಕರಂಜೆ, ಬೀದರ