ಅಣ್ಣನಿಗೆ ಕಿಡ್ನಿ ದಾನ ಮಾಡಿದ ತಮ್ಮ : ಕಾಂಗ್ರೆಸ್ ನಾಯಕರ ಆದರ್ಶ ಕುಟುಂಬ

Must Read

ಮೂಡಲಗಿ: ಕೆಲ ವರ್ಷಗಳಿಂದ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ಅಣ್ಣನಿಗೆ ತಮ್ಮನೇ ಕಿಡ್ನಿ ದಾನ ಮಾಡಿರುವ ಅಪರೂಪದ ಘಟನೆ ಅರಭಾವಿ ಕ್ಷೇತ್ರದಲ್ಲಿ ನಡೆದಿದ್ದು ಕ್ಷೇತ್ರದ ಕಾಂಗ್ರೆಸ್ ನಾಯಕ ಅರವಿಂದ ದಳವಾಯಿ ಕುಟುಂಬದ ಎಲ್ಲರಿಗೂ ಮಾದರಿಯಾಗಿದೆ.

ಕೆಪಿಸಿಸಿ ಸದಸ್ಯ ಹಾಗೂ ೨೦೨೩ ರ ವಿಧಾನಸಭಾ ಚುನಾವಣೆಯ ಅರಭಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಅರವಿಂದ್ ದಳವಾಯಿ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದು, ಅವರಿಗೆ ಅವರ ಸಹೋದರ ಅನಿಲ ಕುಮಾರ್ ದಳವಾಯಿ ತಮ್ಮ ಒಂದು ಕಿಡ್ನಿ ದಾನ ಮಾಡುವ ಮೂಲಕ ಅಣ್ಣನಿಗೆ ಮೂತ್ರಪಿಂಡ ಕಸಿ ಮಾಡಿಸಲು ನೆರವಾಗಿದ್ದಾರೆ. ಅರವಿಂದ್ ದಳವಾಯಿ ಅವರಿಗೆ ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಮೂತ್ರಪಿಂಡ ಕಸಿ ಮಾಡಿಸಲಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ.

ತಮ್ಮ ಸಹೋದರ ತಮಗೆ ಕಿಡ್ನಿ ದಾನ ಮಾಡಿದ ಬಗ್ಗೆ ಹೇಳಿಕೊಂಡ ಅರವಿಂದ ದಳವಾಯಿಯವರು ತಾವಿಬ್ಬರೂ ಈಗ ಆರೋಗ್ಯವಾಗಿ ಇರುವುದಾಗಿ ಹೇಳಿ ತಮಗೆ ಶುಭ ಹಾರೈಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group