ಕುರುಹಿನಶೆಟ್ಟಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ

Must Read

ಭಾಗ್ಯನಗರ ( ಕೊಪ್ಪಳ )- ಕುರುಹಿನಶೆಟ್ಟಿ ಪಂಚ ಕಮಿಟಿ, ಟ್ರಸ್ಟ್, ಮಹಿಳಾ ಮಂಡಳಿ ಮತ್ತು ಯುವಕ ಮಂಡಳಿಯ ವತಿಯಿಂದ 2024-25 ನೇ ಸಾಲಿನ ಹತ್ತನೆಯ ತರಗತಿ ಮತ್ತು ದ್ವಿತೀಯ ಪಿಯುಸಿ ಯಲ್ಲಿ ಉತ್ತಮ ಅಂಕಗಳನ್ನು ಪಡೆದ ಕೊಪ್ಪಳ ಭಾಗ್ಯನಗರದ ಕುರುಹಿನಶೆಟ್ಟಿ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಪ್ರೋತ್ಸಾಹ ಧನ ವಿತರಣೆ ಮಾಡಲಾಯಿತು.

ಕುರುಹಿನಶೆಟ್ಟಿ ಸಮಾಜದ ಕುಲಗುರುಗಳಾದ ಶ್ರೀಶೈಲ ಮೂಲಪೀಠ ಸೂರ್ಯ ಸಿಂಹಾಸನಾಧೀಶ್ವರ ಆಧಿಭಿಕ್ಷಾವೃತ್ತಿ ಮಠ ಶ್ರೀಶ್ರೀ ಶ್ರೀಮದ್ ಜಗದ್ಗುರು 1008 ನಾಲ್ಮಡಿ ಶ್ರೀ ನೀಲಕಂಠ ಪಟ್ಟದಾರ್ಯ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ಜರುಗಿತು.

ಭಾಗ್ಯನಗರ ಕುರುಹಿನಶೆಟ್ಟಿ ಸಮಾಜದ ಅಧ್ಯಕ್ಷರಾದ ನೀಲಕಂಠಪ್ಪ ಮೈಲಿ ಸೇರಿದಂತೆ ದೇವಸ್ಥಾನದ ಎಲ್ಲಾ ಮಂಡಳಿಗಳ ಅಧ್ಯಕ್ಷರು ಪದಾಧಿಕಾರಿಗಳು ಸಮಾಜ ಬಾಂಧವರು ಪೋಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು…

ಮಲ್ಲಿಕಾರ್ಜುನ ಪೋಲಕಲ್
ಗಂಗಾವತಿ

Latest News

ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸಂವಿಧಾನವೇ ಆಧಾರ – ಈರಣ್ಣ ಕಡಾಡಿ

ಮೂಡಲಗಿ: ಬಲಿಷ್ಠ ಪ್ರಜಾಪ್ರಭುತ್ವ ಮೌಲ್ಯಗಳಿಗೆ ನಮ್ಮ ದೇಶದ ಶ್ರೇಷ್ಟ ಸಂವಿಧಾನವೇ ಆಧಾರ ಸ್ತಂಭವಾಗಿದೆ. ಪವಿತ್ರ ಸಂವಿಧಾನದ ಮೌಲ್ಯಗಳನ್ನು ಸದಾ ಪಾಲಿಸುವ ಜೊತೆಗೆ ದೇಶದ ಏಕತೆ, ವೈವಿಧ್ಯತೆ...

More Articles Like This

error: Content is protected !!
Join WhatsApp Group