ಕವನ : ವಚನ ಪಿತಾಮಹ

Must Read

ವಚನ ಪಿತಾಮಹ
===============
ಹರಕು ಬಟ್ಟೆ ಮುರುಕು ಮನೆ
ನಿರಾಭಾರಿ ಫಕೀರನು
ಹಿಡಿದ ಹಟ ಬಿಡದೆ ಸಾಧಿಪ
ಛಲದಂಕ ಮಲ್ಲನು

ಊರು ಕೇರಿ ಸುತ್ತಿ ಸುತ್ತಿ
ಮಠ ಮಂದಿರ ಶೋಧಿಸಿ
ಶರಣ ವಚನ ಕಟ್ಟುಗಳಿಗೆ
ಮರುಹುಟ್ಟು ನೀಡಿದವನು

ಚಂದನ ಕಡಿದು ಕೊರೆದರೂ
ಕಂಪು ಬಿಡದ ಪರಿಯಲಿ
ಬೆಟ್ಟದಷ್ಟು ಕಷ್ಟಪಟ್ಟು
ನಾಡ ಸೇವೆ ಮಾಡಿದವನು

ಕಾಯಕಯೋಗಿ ಜ್ಞಾನಸಿರಿ
ಶಿಕ್ಷಣತಜ್ನ ಸ್ಥಿತಪ್ರಜ್ನನು
ಕನ್ನಡ ನಾಡಿನ ಚರಿತೆಯಲಿ
ನಿತ್ಯ ಶೋಭಿತ ಸೂರ್ಯನು

ವಚನಗಳ ಹಾಸಿಕೊಂಡು
ವಚನಗಳ ಹೊದ್ದುಕೊಂಡು
ವಚನ ಯೋಗ ನಿದ್ರೆ ಮಾಡಿ
ವಚನ ಪಿತಾಮಹನಾಗಿಹನು

ನಿನ್ನ ಹಾಡಿ ಹೊಗಳಲೆಮಗೆ
ಶಬ್ದಗಳೇ ಸಾಲದಿಹವು
ನಿನ್ನ ನಡೆ ನುಡಿಗಳೆಮಗೆ
ದಾರಿ ದೀಪ ವಾಗಿಹವು.

ಆರ್. ಎಸ್. ಚಾಪಗಾವಿ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group