ಚಿಕ್ಕಮಗಳೂರು ಕನ್ನಡ ಭವನದಲ್ಲಿ ರಾಜ್ಯ ಮಟ್ಟದ ಗಾಯನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

Must Read

ಕರ್ನಾಟಕ ರಾಜ್ಯ ಬರಹಗಾರರ ಸಂಘ, ಹೂವಿನಹಡಗಲಿ ಮತ್ತು ಕರ್ನಾಟಕ ರಾಜ್ಯ ಬರಹಗಾರರ ಸಂಘದ ಚಿಕ್ಕಮಗಳೂರು ಜಿಲ್ಲಾ ಘಟಕದ ಸಹಯೋಗದಲ್ಲಿ ಚಿಕ್ಕಮಗಳೂರಿನ ಕನ್ನಡ ಭವನದಲ್ಲಿ ರಾಜ್ಯಮಟ್ಟದ ಗಾಯನ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ದಿನಾಂಕ 27.07.2025ರ ಭಾನುವಾರ ಬೆಳಿಗ್ಗೆ 10:00 ಗಂಟೆಗೆ ಏರ್ಪಡಿಸಲಾಗಿದೆ.

ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ರಾಜ್ಯ ಸಂಘವು ಪ್ರತಿ ಭಾನುವಾರ ಆನ್ಲೈನ್ ನಲ್ಲಿ ಚಿತ್ರಗೀತೆ ಒಳಗೊಂಡು ಜಾನಪದ ಗೀತೆ, ಭಾವಗೀತೆ ಸ್ಪರ್ಧೆಗಳನ್ನು ಏರ್ಪಡಿಸಿಕೊಂಡು ಬಂದು ಭಾಗವಹಿಸಿದ ಎಲ್ಲಾ ಗಾಯಕ ಗಾಯಕಿಯರಿಗೆ ಪ್ರಶಸ್ತಿ ಪತ್ರ ವಿತರಿಸಿ ಪ್ರೋತ್ಸಾಹಿಸಿಕೊಂಡು ಬಂದಿದೆ. ಹೀಗೆ ಭಾಗವಹಿಸಿದ ಗಾಯಕ ಗಾಯಕಿಯರಲ್ಲಿ 34 ಮಂದಿ ಗಾಯಕ ಗಾಯಕಿಯರನ್ನು ಆಯ್ಕೆ ಮಾಡಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸಲಾಗುತ್ತಿದೆ.

ಚಿಕ್ಕಮಗಳೂರು ಜಿಲ್ಲಾ ಬರಹಗಾರರ ಸಂಘದ ಅಧ್ಯಕ್ಷರು ಡಾ.ವಿದ್ಯಾ ಕೆ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಬರಹಗಾರರ ಸಂಘದ ರಾಜ್ಯ ಅಧ್ಯಕ್ಷರು ಮಧುನಾಯಕ್ ಲಂಬಾಣಿ ಉದ್ಘಾಟಿಸುವರು

ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಸೂರಿ ಶ್ರೀನಿವಾಸ್ ಆಶಯ ನುಡಿ ನುಡಿಯುವರು. ಕರ್ನಾಟಕ ರಾಜ್ಯ ಬರಗಾರರ ಸಂಘದ ಗೌರವಾಧ್ಯಕ್ಷರು ಹಾಗೂ ಸಾಹಿತಿಗಳು ಗೊರೂರು ಅನಂತರಾಜು, ಹಾಸನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಹಾಗೂ ಕುರುವಂಜಿ ಕೆ.ಪಿ.ವೆಂಕಟೇಶ್ ಮಾಜಿ ರಾಜ್ಯಾಧ್ಯಕ್ಷರು ಸಫಾಯಿ ಕರ್ಮಚಾರಿ ನಿಗಮ ಮಂಡಳಿ, ಬಿ. ಎಲ್. ಪ್ರವೀಣ್ ಬೆಟ್ಟಗೇರಿ ಗುತ್ತಿಗೆದಾರರು, ಚಿಕ್ಕಮಗಳೂರು, ಜಯಣ್ಣ ಉಗ್ರಾಣ ಪಾಲಕರು, ಮೆಸ್ಕಾಂ, ಎಂ ಎಸ್ ನಾಗರಾಜ್ ಗೌರವಾಧ್ಯಕ್ಷರು, ಎಚ್ ಎಂ ಜಗದೀಶ, ಉಪಾಧ್ಯಕ್ಷರು, ಹಸ್ಯೆನಾರ್ ಬೆಳಗೊಳ, ಜಿಲ್ಲಾ ಕೋಶಾಧ್ಯಕ್ಷರು, ರಾಕೇಶ ಸಿಂಗ್ ನಿರ್ದೇಶಕರು, ಡಾ. ಶೈಲಜಾಕುಮಾರ್, ಭರತನಾಟ್ಯ ಶಿಕ್ಷಕರು ಹಾಸನ, ವಿನೋದ, ಗೌರವ ಸಲಹೆಗಾರರು, ಇಂಪಾ ನಾಗರಾಜ ಗೌರವ ಕಾಯ೯ದರ್ಶಿ, ನವೀನ, ಗೌರವ ಸಲಹೆಗಾರರು, ಬಿ.ಆರ್. ವಿಜಯ ಕುಮಾರ ಸಿ.ಆರ್. ಗೌರವ ಕಾರ್ಯದರ್ಶಿ, ರವಿ ಕುನ್ನಳ್ಳಿ ಗೌರವ ಸಲಹೆಗಾರರು ಭಾಗವಹಿಸುವರು.

ಸಾಧಕರಿಗೆ ಸನ್ಮಾನವನ್ನು ಮಧುಚಂದ್ರ, ಮಜಾ ಭಾರತ ಕಲಾವಿದರು ಹಾಗೂ ರಮೇಶ ಯಾದವ್ ಕಾಮಿಡಿ ಕಿಲಾಡಿಗಳು ಕಲಾವಿದರು ರಾಜ್ಯ ಮಟ್ಟದ ಕನ್ನಡ ಕೋಗಿಲೆ ಪ್ರಶಸ್ತಿ ವಿತರಿಸುವರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group