ಗಾಯನ ಸ್ಪರ್ಧೆಯಲ್ಲಿ ಜ್ಯೋತಿ ಸೆಂಟ್ರಲ್ ವಿದ್ಯಾರ್ಥಿಗಳಿಗೆ ಜಯ

Must Read

ಬೆಳಗಾವಿ – ದಕ್ಷಿಣ ಮಹಾರಾಷ್ಟ್ರ ಶಿಕ್ಷಣ ಮಂಡಳಿಯಿಂದ ನಡೆಸಲ್ಪಡುವ ಜ್ಯೋತಿ ಸೆಂಟ್ರಲ್ ಶಾಲೆಯ ವಿದ್ಯಾರ್ಥಿಗಳು ಸಂಗೀತದಲ್ಲಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು.

ಭಾರತ ವಿಕಾಸ ಪರಿಷತ್ ಬೆಳಗಾವಿಯಿಂದ ಶಾಲಾ ವಿದ್ಯಾರ್ಥಿಗಳಿಗಾಗಿ ಗಾಯನ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಇದರಲ್ಲಿ ಜ್ಯೋತಿ ಸೆಂಟ್ರಲ್ ಶಾಲೆಯ ಗುಂಪು ಜಾನಪದ ಗೀತೆ ಗಾಯನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮತ್ತು ದೇಶಭಕ್ತಿ ಗೀತೆ ಗಾಯನ ಸ್ಪರ್ಧೆಯಲ್ಲಿ ಎರಡನೇ ಸ್ಥಾನವನ್ನು ಗಳಿಸಿತು.

ವಿದ್ಯಾರ್ಥಿಗಳಿಗೆ ಶಾಲಾ ಸಂಗೀತ ಶಿಕ್ಷಕಿ ಶ್ರೀಮತಿ ಅಕ್ಷತಾ ಮೋರೆ ಅವರಿಂದ ಮಾರ್ಗದರ್ಶನ ನೀಡಲಾಗಿತ್ತು. ಶಾಲಾ ಎಸ್‌.ಎಂ.ಸಿ ಸಮಿತಿ ಮತ್ತು ಪ್ರಾಂಶುಪಾಲರಾದ ಶ್ರೀಮತಿ ಸೋನಾಲಿ ಕಂಗ್ರಾಳ್ಕರ ಅವರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು ಮತ್ತು ಅವರ ಯಶಸ್ಸಿನ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು. ಒಟ್ಟು 22 ಶಾಲೆಗಳು ಇದರಲ್ಲಿ ಭಾಗವಹಿಸಿದ್ದವು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group