ಸ್ವಾತಂತ್ರ್ಯ ಹೋರಾಟಗಾರರ ಸೇವೆ ಅನುಪಮ – ಪ್ತೊ. ಹವಾಲ್ದಾರ

Must Read

ಹುನಗುಂದ – ವಿಜ್ಞಾನ, ತಂತ್ರಜ್ಞಾನ ಮತ್ತು ಬಾಹ್ಯಾಕಾಶ ವಿಜ್ಞಾನದಲ್ಲಿ ಅನುಪಮ ಸೇವೆ ಸಲ್ಲಿಸಿದ ನಮ್ಮ ದೇಶದ ವಿಜ್ಞಾನಿಗಳು ನಿಮ್ಮಂತೆ ಮಕ್ಕಳಾಗಿದ್ದರು. ಉತ್ತಮವಾಗಿ ಅಭ್ಯಾಸ ಮಾಡಿ ಮೇಲೇರಿ ಇಂದು ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ ಎಂದು ವಿಜಯ ಮಹಾಂತೇಶ ಮಹಾವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಸಿ.ಜಿ. ಹವಾಲ್ದಾರ್ ಹೇಳಿದರು.

ಇಲ್ಲಿನ ಬಿಜಾಪೂರ ಇಂಟಿಗ್ರೇಟೆಡ್ ರೂರಲ್ ಡೆವ್ಹಲೆಪಮೆಂಟ್ ಸೊಸೈಟಿಯಲ್ಲಿ ಹಮ್ಮಿಕೊಂಡ ೭೯ನೇ ಸ್ವಾತಂತ್ರ್ಯೋ ತ್ಸವ ದಿನಾಚರಣೆ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡುತ್ತ, ಸ್ವಾತಂತ್ರ್ಯ ಹೋರಾಟಗಾರರ ಸೇವೆ ಅನುಪಮ ಅವರ ಸ್ಮರಣೆ ಮತ್ತು ಆದರ್ಶಗಳನ್ನು ಅನುಷ್ಠಾನಗೊಳಿಸುವುದು ಇಂದಿನ ಅಗತ್ಯವಾಗಿದೆ. ನಮ್ಮ ದೇಶ ಇಂದು ಹಸಿರು ಕ್ರಾಂತಿ, ಎಲ್ಲೋ ರೆವಲ್ಯೂಶನ್ ಹಾಗೂ ಬಾಹ್ಯಾಕಾಶದಲ್ಲಿ ಅದ್ಭುತ ಸಾಧನೆಯನ್ನು ಮಾಡಿದೆ. ನಮ್ಮ ನಾಡು, ನುಡಿ, ಕಲೆ, ಸಂಸ್ಕೃತಿ ಮತ್ತು ಇತಿಹಾಸವನ್ನು ಅರಿತುಕೊಂಡು ಹೆಮ್ಮೆ ಪಡೋಣ ಎಂದು ಹವಾಲ್ದಾರ ಹೇಳಿದರು.

ಸಂಸ್ಥೆಯ ಉಪಾಧ್ಯಕ್ಷೆ ಮಹಾದೇವಿ ಕಡಪಟ್ಟಿ ಮತ್ತು ಸಂಸ್ಥೆಯ ಅಜೀವ ಸದಸ್ಯ ವೀರೇಶ ಕುರ್ತಕೋಟಿ ಉಪಸ್ಥಿತರಿದ್ದರು. ಸಂಸ್ಥಾಪಕ ಅರ‍್ಯದರ್ಶಿ ಮಹಾಂತೆಶ ಅಗಸಿಮುಂದಿನ ಸ್ವಾಗತಿಸಿ ನಿರೂಪಿಸಿದರು. ಸಂಸ್ಥೆಯ ಸಿಇಒ ಪ್ರವೀಣ ವಂದಿಸಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group