ಕರ್ತವ್ಯಲೋಪ ;ತಾಯಿ ಮಕ್ಕಳ ಆಸ್ಪತ್ರೆಯ ವೈದ್ಯೆ ಡಾ. ಇರ್ಷಾನಾ ಅಮಾನತು

Must Read

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆಯ ವೈದ್ಯೆ ಇರ್ಷಾನಾ ಕರ್ತವ್ಯ ಲೋಪದ ಆರೋಪದ ಮೇರೆಗೆ ಅಮಾನತುಗೊಂಡಿದ್ದಾರೆ.

ಅಮಾನತು ಮಾಡಿ ಆದೇಶ ಹೊರಡಿಸಿದ ಆರೋಗ್ಯ ಸೇವೆಗಳ ಶಿಸ್ತು ಪ್ರಾಧಿಕಾರಿ ಶಿವಕುಮಾರ ಅವರು,ಇತ್ತೀಚೆಗೆ ಆಸ್ಪತ್ರೆಯಲ್ಲಿ ಮಗು ಜನನದ ನಂತರ ತಾಯಿ ತೀವ್ರ ರಕ್ತಸ್ರಾವದಿಂದ ಸಾವನಪ್ಪಿದ್ದ ಘಟನೆಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿದ್ದಾರೆ.

ಆ.8ರಂದು ಮಗುವಿಗೆ ಜನ್ಮ ನೀಡಿ ತಾಯಿ ಯೊಬ್ಬಳು ರಕ್ತಸ್ರಾವದಿಂದ ಸಾವನಪ್ಪಿದ್ದಳು.ರೋಗಿಗೆ ಸೂಕ್ತ ಚಿಕಿತ್ಸೆ ನೀಡದೇ ಡಾ. ಇರ್ಷಾನಾ ಅವರಿಂದ ಕರ್ತವ್ಯದಲ್ಲಿ ನಿರ್ಲಕ್ಷ್ಯ ಆಗಿದೆ ಎಂಬ ಆರೋಪ ಕೇಳಿಬಂದಿದೆ.

ಡಾ.ಇರ್ಷಾನಾ ಕರ್ತವ್ಯದಲ್ಲಿ ನಿರ್ಲಕ್ಷ ತೋರಿರುವ ಆರೋಪ ಮೇಲ್ನೋಟಕ್ಕೆ ಸಾಬೀತಾಗಿದ್ದು ಈ ಹಿನ್ನೆಲೆ ಶಿಸ್ತು ಪ್ರಾಧಿಕಾರಿ ಮತ್ತು ಆಯುಕ್ತ ಶಿವಕುಮಾರ ಕೆ.ಬಿ. ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ ಎನ್ನಲಾಗಿದೆ.

ವರದಿ : ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group