ವಿಠ್ಠಲ ಸುಳ್ಳನವರ ಇವರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

Must Read

ಹಳ್ಳೂರ- ಗುರ್ಲಾಪುರ ಗ್ರಾಮದ ಶಿಕ್ಷಕ  ವಿಠ್ಠಲ ನಿಂಗಪ್ಪ ಸುಳ್ಳನವರ ಇವರಿಗೆ ಸನ್ 2025 ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಚಿಕ್ಕೋಡಿಯಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ   ನೀಡಿ ಗೌರವಿಸಿದ್ದಾರೆ.

ಇವರು ಹಳ್ಳೂರ ಬಸವನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಭಾರಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ

ವಿಠ್ಠಲ ಇವರು ಚಿಕ್ಕೋಡಿಯಲ್ಲಿ ನಡೆದ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಇವರು ಕೊಡ ಮಾಡುವ ಜಿಲ್ಲಾ ಅತ್ತ್ಯುತ್ತಮ ಪ್ರಶಸ್ತಿಗೆ ಭಾಜನರಾಗಿರುತ್ತಾರೆ . ಈ ಸಮಯಯದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ ಹುಕ್ಕೇರಿ, ಶಾಸಕರಾದ ಗಣೇಶ ಹುಕ್ಕೇರಿ, ಉಪ ನಿರ್ದೇಶಕರಾದ ಆರ್ ಎಸ್ ಸೀತಾರಾಮ, ಜಿಲ್ಲಾಧ್ಯಕ್ಷರು ಎಸ್ ಎಂ ಲೋಕಣ್ಣವರ, ಉಪಸ್ಥಿತರಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಕ್ಷಕ ವೃಂದವರು,ಹಳ್ಳೂರ, ಹಾಗೂ ಗುರ್ಲಾಪೂರ ಗ್ರಾಮದ ಗುರು ಹಿರಿಯರು ಅಭಿನಂದನೆಗಳನ್ನು ಸಲ್ಲಿಸಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group