ಕ್ಷೇತ್ರದ ಅಭಿವೃದ್ಧಿ ಮತ್ತು ನೌಕರರ ಹಿತರಕ್ಷಣೆಗೆ ಬದ್ಧ: ಶಾಸಕ ವಿಶ್ವಾಸ ವೈದ್ಯ

Must Read

ಸವದತ್ತಿ:- ಬೆಳಗಾವಿ ಡಿಸಿಸಿ ಬ್ಯಾಂಕಿಗೆ ನಿರ್ದೇಶಕರಾಗಿ ಅವಿರೋಧ ಆಯ್ಕೆ ಹಾಗೂ ಸವದತ್ತಿಯ ಪುರಸಭೆಯನ್ನು ನಗರಸಭೆಯನ್ನಾಗಿ ಮಾಡಲು ಶ್ರಮಿಸಿದ ಪ್ರಯುಕ್ತ ಸವದತ್ತಿ ಯಲ್ಲಮ್ಮ ವಿಧಾನ ಸಭಾ ಮತಕ್ಷೇತ್ರದ ಶಾಸಕರಾದ ವಿಶ್ವಾಸ ವಸಂತ ವೈದ್ಯರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕಾ ಶಾಖೆಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು, ನಂತರ ಮಾತನಾಡಿದ ಅವರು ಕ್ಷೇತ್ರದ ಅಭಿವೃದ್ಧಿ ಹಾಗೂ ತಾಲೂಕಿನ ಸಮಸ್ತ ನೌಕರರ ಹಿತರಕ್ಷಣೆಗಾಗಿ ಬದ್ಧರಾಗಿರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ನೌಕರ ಸಂಘದ ಅಧ್ಯಕ್ಷರಾದ ಅಶೋಕ ಮುರಗೋಡ, ಖಜಾಂಚಿ ಎಮ್.ಎಸ್.ಮುದಗಲ್ಲ, ಕಾರ್ಯದರ್ಶಿ ಎನ್.ಎನ್.ಕಬ್ಬೂರ, ಉಪಾಧ್ಯಕ್ಷರಾದ ರವಿ ಸಣಕಲ್, ಸಂಘಟನಾ ಕಾರ್ಯದರ್ಶಿಯಾದ ಪವನ ಅಮಠೆ, ಗುರುನಾಥ ಮೇಟಿ, ಹಿರಿಯ ನಿರ್ದೇಶಕರಾದ ಮಲ್ಲಯ್ಯ ಕಂಬಿ, ರಾಮಣ್ಣ ಗುಡಗಾರ, ಶಿಕ್ಷಕ ಸಂಘದ ಅಧ್ಯಕ್ಷರಾದ ಕಿರಣ ಕುರಿ, ಸದಸ್ಯರಾದ ಪ್ರಕಾಶ ಹೆಮ್ಮರಡಿ, ಸುನೀಲ ಏಗನಗೌಡರ, ಶಿಕ್ಷಕರಾದ ಸತೀಶ ಮಿರಜಕರ ಮತ್ತು ನೌಕರ ಸಂಘ ಹಾಗೂ ಶಿಕ್ಷಕರ ಸಂಘದ ಪದಾಧಿಕಾರಿಗಳು, ನಿರ್ದೇಶಕರು ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group