ರೇಬಿಸ್ ರೋಗ ಜಾಗೃತಿ ಅಗತ್ಯ- ಡಾ ವಿಶ್ವನಾಥ ಹುಕ್ಕೇರಿ

Must Read

ಹಳ್ಳೂರ ರೇಬಿಸ್ ಲಸಿಕೆ ಹಾಕುವುದರಿಂದ ರೋಗವನ್ನು ನಿಯಂತ್ರಿಸಲು ಸಾಧ್ಯ ಎಂಬುದನ್ನು ವಿದ್ಯಾರ್ಥಿಗಳಿಗೆ ಪಾಠದ ಮೂಲಕ ಅರಿವು ಮೂಡಿಸಿ ರೋಗ ರುಜಿನಗಳು ಬಾರದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪಶು ವೈದ್ಯಾಧಿಕಾರಿ ವಿಶ್ವನಾಥ ಹುಕ್ಕೇರಿ ಹೇಳಿದರು.

ಅವರು ಗ್ರಾಮದ ಶಿವಶಂಕರ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರೇಬಿಸ್ ಜಾಗೃತಿ ಶಿಬಿರದ ಕಾರ್ಯಕ್ರಮದಲ್ಲಿ ಮಾತನಾಡಿ ಪ್ರತಿಯೊಂದು ನಾಯಿಗಳಿಗೆ ರೇಬಿಸ್ ಲಸಿಕೆ ಹಾಕುವುದು ಒಳ್ಳೆಯದು. ಹುಚ್ಚು ನಾಯಿ ಕಂಡುಬಂದರೆ ಜಾಗೃತ ವಹಿಸಿ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಬೇಕು. ರೋಗದ ಬಗ್ಗೆ ರೋಗ ಹರಡುವ ವಿಧಾನ,ಲಕ್ಷಣಗಳು, ತಡೆಗಟ್ಟುವ ಮಾರ್ಗಗಳು ಲಸಿಕೆ ಮಹತ್ವವನ್ನು ಸಂಪೂರ್ಣ ಮಾಹಿತಿ ನೀಡಿದರು.

ಈ ಸಮಯದಲ್ಲಿ ಪ್ರಧಾನ ಗುರುಗಳಾದ ಆರ್ ಕೆ ಮೇಲಗಡೆ, ಮುರಿಗೆಪ್ಪ ಮಾಲಗಾರ, ಬಿ ಜೆ ಪಾರ್ಥನಳ್ಳಿ,  ಶೋಭಾ ಮುತಾರಿ, ಆರ್ ಪಿ ಹರಿಜನ ಸೇರಿದಂತೆ ವಿದ್ಯಾರ್ಥಿಗಳಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group