ಬೀದರ – ಛತ್ರಪತಿ ಶಿವಾಜಿ ಮಹಾರಾಜರು ಒಬ್ಬ ಪ್ರೇರಣಾ ಪುರುಷ ಹಿಂದೂ ಸಾಮ್ರಾಜ್ಯದ ಅತ್ಯಂತ ಯಶಸ್ವಿ ರಾಜ ಅಂಥವರ ಹೆಸರನ್ನು ಶಿವಾಜಿನಗರ ಮೆಟ್ರೋ ರೈಲು ನಿಲ್ದಾಣದಿಂದ ಬದಲಾಯಿಸಿದರೆ ರಾಜ್ಯ ಸರ್ಕಾರದ ವಿರುದ್ಧ ಅತ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಮಹಾರಾಷ್ಟ್ರ ರಾಜ್ಯ ಸಂಭಾಜಿ ಬ್ರಿಗೇಡ್ ಅಧ್ಯಕ್ಷ ಡಾ. ಮನೋಜ ಅಖಾರೆ ವಾಗ್ದಾಳಿ ನಡೆಸಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರಗಳು ಯಾವಾಗಲೂ ಮರಾಠಾ ಸಮುದಾಯಕ್ಕೆ ಅನ್ಯಾಯ ಮಾಡುತ್ತ ಬಂದಿವೆ ಎಂದರು.
ಮರಾಠಾ ಸಮುದಾಯದ ಜನರು ೨೨ ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ಜಯ ಸಿಕ್ಕಿಲ್ಲ. ಮೀಸಲಾತಿ ಸಿಗುತ್ತಿಲ್ಲ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ನಮ್ಮ ಸಮುದಾಯಕ್ಕೆ ಮೋಸಮಾಡಿದ್ದಾರೆ. ಈ ಸರ್ಕಾರದಿಂದ ಕೂಡ ಅನ್ಯಾಯವಾಗಿದೆ ಆದ್ದರಿಂದ ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲಿ ಪ್ರತಿಭಟನೆ ಆರಂಭಿಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.
ವರದಿ : ನಂದಕುಮಾರ ಕರಂಜೆ, ಬೀದರ

