ಚಿತ್ರರಂಗದಲ್ಲಿ ಗ್ರಾಮೀಣ ಪ್ರತಿಭೆಗಳಿಗೆ ಅವಕಾಶಕ್ಕೆ ಭೇರ್ಯ ರಾಮಕುಮಾರ್ ಒತ್ತಾಯ

Must Read

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಅಪಾರ ಪ್ರತಿಭೆಯ ಕವಿಗಳಿದ್ದು ಅವರ ಜನಮನ ಸೆಳೆಯುವ ಕವಿತೆಗಳನ್ನು ಕನ್ನಡ ಚಲನ ಚಿತ್ರಗಳಿಗೆ ಅಳವಡಿಸಿಕೊಳ್ಳಬೇಕು. ಈ ಬಗ್ಗೆ ಚಲನಚಿತ್ರ ನಿರ್ಮಾಪಕರ ಹಾಗೂ ನಿರ್ದೇಶಕರ ಗಮನ ಸೆಳೆಯಬೇಕೆಂದು ಹೆಸರಾಂತ ಗೀತ ರಚನಕಾರ ಕವಿರಾಜ್ ಅವರನ್ನು ಭೇಟಿಮಾಡಿ ಕನ್ನಡ ಸಾಹಿತ್ಯ ಪರಿಷತ್ ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಭೇರ್ಯ ರಾಮಕುಮಾರ್ ಮನವಿ ಮಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ನೂರಾರು ಲೇಖಕ, ಲೇಖಕಿಯರಿದ್ದಾರೆ. ಅವರ ರಚನೆಗಳು ಸರಳವಾಗಿ ಮನಸೆಳೆಯುವಂತಿವೆ. ಆದರೆ ಇವರೆಲ್ಲರೂ ಅವಕಾಶ ವಂಚಿತರಾಗಿದ್ದಾರೆ. ಇಂತವರಿಗೆ ಚಿತ್ರರಂಗದಲ್ಲಿ ಸೂಕ್ತ ಅವಕಾಶ ಕಲ್ಪಿಸಬೇಕು ಎಂದವರು ಕವಿರಾಜ್ ಅವರನ್ನು ಒತ್ತಾಯಿಸಿದರು. ಇದೊಂದು ಅತ್ಯುತ್ತಮ ಸಲಹೆ.ಈ ಬಗ್ಗೆ ಆಲೋಚಿಸುವುದಾಗಿ ಕವಿರಾಜ್ ತಿಳಿಸಿದರು.

ಕೊಡಗಿನ ಕವಿ ಎಂ. ಡಿ. ಅಯ್ಯಪ್ಪ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Latest News

ಕವನ : ಸಮಾನತೆಯ ಬೆಳದಿಂಗಳ ಪಲ್ಲವಿ

ಸಮಾನತೆಯ ಬೆಳದಿಂಗಳ ಪಲ್ಲವಿಭಾರತಾಂಬೆಗೆ ಹೊನ್ನ ಕಿರೀಟವಿದು ಸರಳ ಸಂವಿಧಾನ ನಮ್ಮ ಸಂವಿಧಾನಪೀಠಿಕೆಯ ಪರಿಧಿಯಲಿ ಜಾತ್ಯತೀತ,ಬ್ರಾತೃತ್ವ, ಸಮಾಜವಾದಿ ಸಾರ್ವಭೌಮತೆ,ಗಣತಂತ್ರ ನ್ಯಾಯ, ಸಮಾನತೆ ಸ್ವಾತಂತ್ರ್ಯದ ದುಂದುಭಿ ಜೀವದಾಯಿನಿ ಇದು ಭಾರತದ ಪಾಲಿಗೆ ಮುಕ್ತಿದಾಯಿನಿ ಇದು ದಾಸ್ಯದ ಸಂಕೋಲೆಗೆ ನಮ್ಮ ಸಂವಿಧಾನ ನಮಗೆ ಸುವಿಧಾನಲಿಖಿತವೂ ಧೀರ್ಘವೂ ಭಾರತಕ್ಕಿದು ಮಾರ್ಗವು ಅಸಮಾನತೆಯ...

More Articles Like This

error: Content is protected !!
Join WhatsApp Group