ಕವನ : ಭೀಕರ ಭೂಕಂಪ

Must Read

ಭೀಕರ ಭೂಕಂಪ

ಏನು ದೈವವಿದು
ನಾವು ಬೆರೆತುಕೊಂಡು
ಹಲವು ದಶಕ
ಬದುಕು ಸಾಗಿಸುತ್ತಿರುವಾಗ
ಇಬ್ಬಾಗಿಸುವ ವಿಧಿಯೊಂದು
ಧಿಡೀರನೇ ಬಂದು ನಿಲ್ಲಬೇಕೆ ?
ಬಾಳ ಪಯಣದಲಿ
ಎಂದೂ ಕಂಡರಿಯದ
ಭೀಕರ ಭೂಕಂಪ !
ಭೂಮಿ ಬಿರಿಯಿತು
ಮೋಡ ನೆಲ ಕಚ್ಚಿತು
ಕೆಂಡದ ಮಳೆ
ಮೌನದಲಿ ಸೂರ್ಯ
ಕಣ್ಣು ಮುಚ್ಚಿದ
ದಿಕ್ಕೆಟ್ಟು ನಿಂತೆವು
ಗೂಡು ತೊರೆದು
ಸಿಹಿ ಸಂಸಾರದ
ಜೋಡು ಹಕ್ಕಿ
ಪುಟ್ಟ ಮರಿ ಅಗಲಿದವು
ಸಾವು ನೋವಿನಲ್ಲಿ
ಅಳಿದುಳಿದವರು ಸುಧಾರಿಸುವುದು
ಬಹು ದೀರ್ಘದ
ಶೋಕ ಕಾವ್ಯ
ಶಿವಶಂಕರನಿಗೆ
ಭಾವ ನಮನ
ಬದುಕು ನೂಕುವುದು
ಅವನ ನೆನಪಿನಲಿ
ಅವನ ನೆನಹಿನಲಿ

_________________________

ಡಾ.ದಾಕ್ಷಾಯಿಣಿ ಮಂಡಿ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group