ಸಂಗಮೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Must Read

ಹುನಗುಂದ : ಬಾಗಲಕೋಟೆಯ ಬ.ವಿ.ವ ಸಂಘದ ಅಂಗಸಂಸ್ಥೆಯಾದ ತಾಲೂಕಿನ ಕೂಡಲಸಂಗಮದ ಶ್ರೀ ಸಂಗಮೇಶ್ವರ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮುಧೋಳದಲ್ಲಿ ಜರುಗಿದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಟೇಕ್ ವಾಂಡೋ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನವನ್ನು ಕುಮಾರಿ ಸಂಗೀತಾ ಅಂಗಡಿ, ಜುಡೋ ಸ್ಪರ್ಧೆಯಲ್ಲಿ ಪಲ್ಲವಿ ಕುಂಬಾರ ಹಾಗೂ ಸವಿತಾ ಕೋಟಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

ಸಾಧನೆಗೈದ ಕ್ರೀಡಾ ಸ್ಪರ್ಧಾಳು ವಿದ್ಯಾರ್ಥಿನಿಯರಿಗೆ ಬ.ವಿ.ವ ಸಂಘದ ಕಾರ್ಯಾಧ್ಯಕ್ಷರಾದ ಡಾ. ವೀರಣ್ಣ ಚರಂತಿಮಠ ಗೌರವ ಕಾರ್ಯದರ್ಶಿಗಳಾದ ಮಹೇಶ ಅಥಣಿ, ಆಡಳಿತಮಂಡಳಿಯ ಕಾರ್ಯಾಧ್ಯಕ್ಷ ಮಹಾಂತೇಶ ಶೆಟ್ಟರ್ ಪದನಿಮಿತ್ತ ಕಾರ್ಯದರ್ಶಿಗಳಾದ ಕೆ.ಎಚ್. ಹೊಸೂರ ಪ್ರಾಚಾರ್ಯರಾದ ಬಸವರಾಜ ಚೌಗಲೆ ಹಾಗೂ ಸಿಬ್ಬಂದಿವರ್ಗದವರು ಅಭಿನಂಧನೆ ಸಲ್ಲಿಸಿದ್ದಾರೆ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group