ಯುವಕರು ಸಾಹಿತ್ಯ ಸಂಸ್ಕೃತಿಯ ರಾಯಭಾರಿಗಳಾಗಬೇಕು – ಎಸ್ ಎಂ ಜೇವರ್ಗಿ

Must Read

ಸಿಂದಗಿ; ಕನ್ನಡ ನಾಡು ಸಾಹಿತ್ಯ, ಸಂಸ್ಕೃತಿಯ ನೆಲೆಬೀಡು, ಸಂತ ಶರಣರ ನಾಡು ಎಂದು ಹೆಸರುವಾಸಿಯಾಗಿದೆ. ಅಂತಹ ಶರಣರ, ಸಂತರ, ಕವಿಪುಂಗವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗುತ್ತಿರುವ ಯುವಜನತೆ ಸಾಹಿತ್ಯ, ಸಂಸ್ಕೃತಿಯ ರಾಯಭಾರಿಗಳಾಗಬೇಕೆಂದು ಸರ್ಕಾರಿ ಪ್ರೌಢಶಾಲೆಯ ಕನ್ನಡ ಶಿಕ್ಷಕರು ಹಾಗೂ ಪ್ರಸಕ್ತ ಸಾಲಿನ ಜಿಲ್ಲಾ ಅತ್ಯುತ್ತಮ ತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಎಸ್.ಎಂ. ಜೇವರ್ಗಿ ಹೇಳಿದರು.

ಪಟ್ಟಣದ ಪಿ.ಇ.ಎಸ್. ಗಂಗಾಧರ ಎನ್. ಬಿರಾದಾರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಶ್ರೀಮತಿ ಪ್ರೇಮಾ ಭೀ. ಕರ್ಜಗಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿರುವ ಕನ್ನಡ ರಾಜ್ಯೋತ್ಸವ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು ಕವಿರಾಜಮಾರ್ಗ ಕವಿಯಾದ ಶ್ರೀವಿಜಯನ ನುಡಿಯಂತೆ ಕನ್ನಡನಾಡು ಕಾವೇರಿಯಿಂದ ಗೋಧಾವರಿಯವರೆಗೆ ಸಮೃದ್ಧವಾಗಿದೆ. ಇಂತಹ ನಾಡಿನಲ್ಲಿ ಜನಿಸಿದ ನಾವು ಶೂರರು, ಧೀರರು, ಓದಲು ಬಾರದೆಯಿದ್ದರೂ ಸಾಹಿತ್ಯ ರಚನೆಯನ್ನು ಮಾಡುವ ಶಕ್ತಿಯುಳ್ಳವರು. ಇಂತಹ ನಾಡಿನಲ್ಲಿ ಜನಿಸಿದ ನಾವೇ ಪುಣ್ಯವಂತರು ಎಂದರು.

ಸಮಾರಂಭದ ಅಧ್ಯಕ್ಷತೆ ಸಂಸ್ಥೆಯ ಕಾರ್ಯದರ್ಶಿ ಬಿ.ಪಿ. ಕರ್ಜಗಿ ವಹಿಸಿದ್ದರು. ಸಂಸ್ಥೆಯ ಆಡಳಿತಾಧಿಕಾರಿ ಆಯ್.ಬಿ. ಬಿರಾದಾರ, ಮಾರ್ಗದರ್ಶಕ ಸಾಹಿತಿ ಕೆ.ಎಚ್. ಸೋಮಾಪೂರ, ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಜಿ.ಎಸ್. ಕಡಣಿ, ಪ.ಪೂ ಮಹಾವಿದ್ಯಾಲಯದ ಪ್ರಾಚಾರ್ಯ ಆರ್.ಬಿ. ಗೋಡಕರ, ವಿಶ್ರಾಂತ ಉಪನ್ಯಾಸಕ ಪಿ.ಎಂ. ಮಡಿವಾಳರ ಉಪಸ್ಥಿತರಿದ್ದರು. ಉಪನ್ಯಾಸಕ ಮಹಾಂತೇಶ ದಂಡವತ ನಿರೂಪಿಸಿ ವಂದಿಸಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group