೧೫ ನೇ ಹಣಕಾಸಿನಲ್ಲಿ ಅಕ್ರಮ ಆರೋಪ, ಪಿಡಿಓ ಅಮಾನತು

Must Read

ಬೀದರ್ – ೧೫ ನೇ ಹಣಕಾಸು ಆಯೋಗದ ಅನುದಾನದಲ್ಲಿ ಅವ್ಯವಹಾರ ಮಾಡಿದ ಆರೋಪದ ಮೇರೆಗೆ ಜಿಲ್ಲೆಯ ಹುಲಸೂರ ಗ್ರಾಮ ಪಂಚಾಯತ್ ಪಿಡಿಓ ರಮೇಶ್ ಮಿಲಿಂದಕರ ಅಮಾನತುಗೊಂಡಿದ್ದಾರೆ.

ಅಮಾನತು ಮಾಡಿ ಬೀದರ ಜಿಲ್ಲಾ ಪಂಚಾಯತ ಸಿಇಓ ಗಿರೀಶ್ ಬದೋಲೆ ಆದೇಶ ಹೊರಡಿಸಿದ್ದಾರೆ.

ಗ್ರಾಮ ಸಭೆ, ಸಾಮಾನ್ಯ ಸಭೆ ನಡೆಸದೆ ಕ್ರಿಯಾಯೋಜನೆ ಸಿದ್ಧಪಡಿಸಿ ಹಣ ಲೂಟಿ ಆರೋಪ, ಸದಸ್ಯರ ಗಮನಕ್ಕೆ ತರದೆ ನಿಯಮ ಮೀರಿ ಬಿಲ್ ಪಾವತಿ ಮಾಡಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಸಿಇಓಗೆ ಸದಸ್ಯರಿಂದ ದೂರು ಹೋಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಅಧಿಕಾರಿಗಳಿಂದ ತನಿಖೆ ಕೈಗೊಂಡು, ತನಿಖೆ ವೇಳೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪಿಡಿಓ ಅಮಾನತು ಆದೇಶ ಹೊರಡಿಸಲಾಗಿದೆ.

ಸರ್ಕಾರದ ನಿಯಮ ಮೀರಿ 15ನೇ ಹಣಕಾಸಿನ ಅನುದಾನ ಪಾವತಿ ಮಾಡಿರುವುದು ಬೆಳಕಿಗೆ ಬಂದಿದೆ.

ವರದಿ : ನಂದಕುಮಾರ ಕರಂಜೆ, ಬೀದರ

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...

More Articles Like This

error: Content is protected !!
Join WhatsApp Group