ಕರ್ನಾಟಕದ ಪರಿಸರವಾದಿ, ಸಾಲು ಸಾಲು ಮರಗಳನ್ನು ನೆಟ್ಟು ಹೆಸರಾಗಿದ್ದ ಸಾಲು ಮರದ ತಿಮ್ಮಕ್ಕ (೧೧೪) ತೀರಿಕೊಂಡಿದ್ದಾರೆ.
ಮಕ್ಕಳಾಗದ ದುಃಖವನ್ನು ಮರೆಮಾಚಲು ರಸ್ತೆ ಪಕ್ಕ ಸಾಲು ಸಾಲಾಗಿ ಮರಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ನೋಡಿಕೊಂಡ ತಿಮ್ಮಕ್ಕ ತಮ್ಮ ೧೧೪ ನೇ ವಯಸ್ಸಿನಲ್ಲಿ ತೀರಿಕೊಂಡಿದ್ದಾರೆ.
ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ತಿಮ್ಮಕ್ಕನವರಿಗೆ ರಾಷ್ಟ್ರೀಯ ಪೌರ ಪ್ರಶಸ್ತಿ – ೧೯೯೫, ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ – ೧೯೯೭, ರಾಜ್ಯೋತ್ಸವ ಪ್ರಶಸ್ತಿ, ‘ನಾಡೋಜ’ ಪ್ರಶಸ್ತಿ, ೨೦೧೯ ರ ಪದ್ಮಶ್ರೀ ಪ್ರಶಸ್ತಿ ದೊರಕಿವೆ.

