ಪರಿಸರವಾದಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

Must Read

ಕರ್ನಾಟಕದ ಪರಿಸರವಾದಿ, ಸಾಲು ಸಾಲು ಮರಗಳನ್ನು ನೆಟ್ಟು ಹೆಸರಾಗಿದ್ದ ಸಾಲು ಮರದ ತಿಮ್ಮಕ್ಕ (೧೧೪) ತೀರಿಕೊಂಡಿದ್ದಾರೆ.

ಮಕ್ಕಳಾಗದ ದುಃಖವನ್ನು ಮರೆಮಾಚಲು ರಸ್ತೆ ಪಕ್ಕ ಸಾಲು ಸಾಲಾಗಿ ಮರಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ನೋಡಿಕೊಂಡ ತಿಮ್ಮಕ್ಕ ತಮ್ಮ ೧೧೪ ನೇ ವಯಸ್ಸಿನಲ್ಲಿ ತೀರಿಕೊಂಡಿದ್ದಾರೆ.

ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್‌ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.

ತಿಮ್ಮಕ್ಕನವರಿಗೆ ರಾಷ್ಟ್ರೀಯ ಪೌರ ಪ್ರಶಸ್ತಿ – ೧೯೯೫, ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ – ೧೯೯೭, ರಾಜ್ಯೋತ್ಸವ ಪ್ರಶಸ್ತಿ, ‘ನಾಡೋಜ’ ಪ್ರಶಸ್ತಿ, ೨೦೧೯ ರ ಪದ್ಮಶ್ರೀ ಪ್ರಶಸ್ತಿ ದೊರಕಿವೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group