ಪಾಂಚಜನ್ಯ ಪ್ರತಿಷ್ಠಾನದಿಂದ ವ್ಯಕ್ತಿತ್ವ ವಿಕಸನ ಕಾರ್ಯಾಗಾರ

Must Read

ಬೆಂಗಳೂರು – ಪಾಂಚಜನ್ಯ ಪ್ರತಿಷ್ಠಾನ ವತಿಯಿಂದ ರಾಜಾನುಕುಂಟೆ ಸಮೀಪ, ದೊಡ್ಡಬಳ್ಳಾಪುರ ರಸ್ತೆ , ಕಾಕೋಳು ಸರ್ಕಾರೀ ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಆವರಣದ ಬಯಲು ರಂಗಮಂದಿರದಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಮತ್ತು ಸಂವಾದ ನಡೆಯಿತು .

ಅಂಕಣಕಾರ್ತಿ ಶ್ರೀಮತಿ ರೂಪಾ ಗುರುರಾಜ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ,, ಸಮಾಜದಲ್ಲಿ ಅರ್ಥಪೂರ್ಣ ಸಕಾರಾತ್ಮಕ ಬದಲಾವಣೆಯನ್ನು ತರಲು ನಿರಂತರವಾಗಿ ಶ್ರಮಿಸುತ್ತಿರುವ ಪಾಂಚಜನ್ಯ ಪ್ರತಿಷ್ಠಾನದ ಕಾರ್ಯ ಸ್ಪೂರ್ತಿದಾಯಕವಾಗಿದೆ – ವಿಶೇಷವಾಗಿ ಗ್ರಾಮೀಣ ಮಕ್ಕಳ ಶಿಕ್ಷಣ ಕ್ಷೇತ್ರದಲ್ಲಿ, ಸಮರ್ಪಿತ ಶಿಕ್ಷಕರು ಯುವ ಮನಸ್ಸುಗಳನ್ನು ರೂಪಿಸಲು ತೆಗೆದುಕೊಳ್ಳುತ್ತಿರುವ ಪ್ರಾಮಾಣಿಕ ಪ್ರಯತ್ನಗಳು ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು .

ಶಾಲಾ ಮುಖ್ಯ ಶಿಕ್ಷಕಿ ಅನಿತಾ ಲಕ್ಷ್ಮಿ , ಪಾಂಚಜನ್ಯ ಪ್ರತಿಷ್ಠಾನ ವಿಶ್ವಸ್ಥರಾದ ಮುರಳಿ ಕಾಕೋಳು , ಸ್ಥಳೀಯ ಶಾಲಾ ಉಸ್ತುವಾರಿ , ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ವಿಜೇತ ಮೊದಲಾದವರು ಉಪಸ್ಥಿತರಿದ್ದರು .

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group