ಮುಗಳಖೋಡದಲ್ಲಿ ಗ್ರಾಮದೇವತಾ ಆರಾಧನೆ-ಜನಪದ ಸಂಸ್ಕೃತಿ ಸಂಭ್ರಮ

Must Read

ಮುಧೋಳ – ತಾಲೂಕಿನ ಸುಕ್ಷೇತ್ರ ಮುಗಳಖೋಡದಲ್ಲಿ ಶ್ರೀ ಮನ್ ನಿಜಗುಣ ಶಿವಯೋಗಿ ರಾಷ್ಟ್ರೀಯ ಪ್ರತಿಷ್ಠಾನ [ರಿ] ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ವಾರಾಚರಣೆ ನಿಮಿತ್ತ ಗ್ರಾಮದೇವತಾ ಆರಾಧನೆ, ಶ್ರೀದೇವಿ ಪಾರಾಯಣ -ಪುರಾಣ ಕಾರ್ಯಕ್ರಮವು ಇದೇ ಜನವರಿ ದಿ .30 ಶುಕ್ರವಾರ ಬೆಳಗ್ಗೆ 8.30 ಕ್ಕೆ ಪ್ರಾರಂಭಗೊಳ್ಳಲಿದೆ ಎಂದು ಶ್ರೀ ಸಿದ್ಧಾರೂಢ ಭಾರತಿ ಆಶ್ರಮದ ಕುಮಾರ ಗುರುಪ್ರಸಾದ್ ಸ್ವಾಮೀಜಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆಬ್ರುವರಿ ದಿ .6 ಶುಕ್ರವಾರದ ವರೆಗೆ ನಡೆಯುವ ಗ್ರಾಮದೇವತಾ ಆರಾಧನೆ – ಶ್ರೀದೇವಿ ಪುರಾಣ-ಪ್ರವಚನವು ಆಶ್ರಮದ ಪೂಜ್ಯರಾದ ಶರಣಬಸವ ಶಾಸ್ತ್ರಿಗಳಿಂದ ಪ್ರತಿದಿನ ಬೆಳಗ್ಗೆ 6 ರಿಂದ 7 ರ ವರೆಗೆ ಹಾಗೂ ಸಂಜೆ 8 ರಿಂದ 9 ರ ವರೆಗೆ ನಡೆಯಲಿದೆ. ಫೆಬ್ರುವರಿ 6 ಶುಕ್ರವಾರ ಬೆಳಗ್ಗೆ 8.30 ಕ್ಕೆ ನವದುಗಿ೯ಯರಿಗೆ ಉಡಿ ತುಂಬುವುದು. ಸೇವಾ ಧುರೀಣರಿಗೆ ಸತ್ಕಾರ ನಂತರ ವಿವಿಧ ಗ್ರಾಮಗಳ ವಿವಿಧ ಕಲಾತಂಡಗಳಿಂದ ಜನಪದ ಸಂಸ್ಕೃತಿ ಸಂಭ್ರಮ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುವವು .

ಭಾಗವಹಿಸಿದ ಕಲಾ ತಂಡಗಳನ್ನು ಗೌರವಿಸಿ ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು.ಹೆಚ್ಚಿನ ಮಾಹಿತಿಗೆ 9972682938/9742915714-ಈ ಸಂಖ್ಯೆಗೆ ಸಂಪರ್ಕಿಸಲು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

Latest News

ಮಹಿಳೆಯರ ಅಬಲೆಯರ ಅನಾಥರ ಆಶಾಕಿರಣ ಎಸ್. ಜಿ. ಸುಶೀಲಮ್ಮ

ವರ್ಗ ವರ್ಣ ಲಿಂಗ ಭೇದ ಆಶ್ರಮ ರಹಿತ ಸಾಂಸ್ಥಿಕರಣವಲ್ಲದ ಸಮಸಮಾಜವನ್ನು ಕಟ್ಟ ಬಯಸಿದ ಅಣ್ಣ ಬಸವಣ್ಣನವರ ಆದರ್ಶ ವ್ಯಕ್ತಿತ್ವಗಳಿಗೆ ಮಾರು ಹೋಗಿ ತಮ್ಮ ಬದುಕಿನ ಆರು...

More Articles Like This

error: Content is protected !!
Join WhatsApp Group