ಕಬ್ಬು ಬೆಳಗಾರರ ಸಮಸ್ಯೆ ಕುರಿತು ವಿತ್ತ ಸಚಿವೆಯ ಭೇಟಿ ಮಾಡಿದ ಕಡಾಡಿ

Must Read

ದೇಶದ ಕಬ್ಬು ಬೆಳೆಗಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ರಾಷ್ಟ್ರೀಯ ಬಿಜೆಪಿ ಕಿಸಾನ್ ಮೋರ್ಚಾ ಪದಾಧಿಕಾರಿಗಳ ನಿಯೋಗದೊಂದಿಗೆ ನಿರ್ಮಲಾ ಸೀತಾರಾಮನ್ ಅವರ ಭೇಟಿ

ಮೂಡಲಗಿ: ದೇಶದ ಕಬ್ಬು ಬೆಳೆಗಾರ ರೈತರು ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ಚರ್ಚಿಸುವ ಹಿನ್ನೆಲೆಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ರಾಷ್ಟ್ರೀಯ ಬಿಜೆಪಿ ಕಿಸಾನ್ ಮೋರ್ಚಾ ಪದಾಧಿಕಾರಿಗಳೊಂದಿಗೆ ಸಂಸದ ಈರಣ್ಣ ಕಡಾಡಿ ನವದೆಹಲಿಯ ಸಂಸತ್ತಿನ ಕೇಂದ್ರ ಸಚಿವರ ಕಾರ್ಯಾಲಯದಲ್ಲಿ ಭೇಟಿ ಮಾಡಿ ವಿಸ್ತೃತ ಚರ್ಚೆ ನಡೆಸಿದರು.

ಪ್ರತಿ ವರ್ಷ ಎಫ್.ಆರ್.ಪಿ ದರ ನಿಗದಿ ಮಾಡುವ ಸಂದರ್ಭದಲ್ಲಿ ಕಬ್ಬಿನ ರಿಕವರಿಯ ಪ್ರತಿಶತ ಹೆಚ್ಚಿಸುತ್ತಿರುವುದು ರೈತರಿಗೆ ಮಾರಕವಾಗಿದೆ, ಹೀಗಾಗಿ ಕಬ್ಬಿನ ರಿಕವರಿ ಪ್ರಮಾಣವನ್ನು 9.25% ರಿಂದ 10.25% ಕ್ಕೆ ಹೆಚ್ಚಿಸಿರುವುದು ಕಬ್ಬು ಬೆಳೆಗಾರರಿಗೆ ಆರ್ಥಿಕ ನಷ್ಟ ಉಂಟುಮಾಡುತ್ತದೆ. ರೈತರ ಹಿತದೃಷ್ಟಿಯಿಂದ ಸರ್ಕಾರವು ಈ ನಿರ್ಧಾರವನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.

ದೇಶದಲ್ಲಿ ಅಡಿಕೆ, ತೆಂಗು ಮತ್ತು ಕಾಫಿ ಬೆಳೆಗಾರರಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿರುವ ಕಬ್ಬು ಬೆಳೆಗಾರರ ಸಮಸ್ಯೆಗಳು ಅತ್ಯಂತ ಗಂಭೀರವಾಗಿವೆ. ಕಬ್ಬು ಕೇವಲ ಸಕ್ಕರೆಗೆ ಸೀಮಿತವಾಗಿಲ್ಲ. ಕಬ್ಬಿನಿಂದ ಉತ್ಪತ್ತಿಯಾಗುವ ಎಥೆನಾಲ್, ಮೊಲ್ಯಾಸಿಸ್, ವಿದ್ಯುತ್ ಮತ್ತು ಸಾವಯವ ಗೊಬ್ಬರಗಳಂತಹ ಉಪ ಉತ್ಪನ್ನಗಳು ದೇಶದ ಇಂಧನ ಮತ್ತು ಕೃಷಿ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡುತ್ತಿವೆ. ಈ ಎಲ್ಲಾ ಉತ್ಪನ್ನಗಳ ಮೇಲೆ ಕೋಟ್ಯಂತರ ಜನರು ಅವಲಂಬಿತರಾಗಿರುವುದರಿಂದ, ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಗಂಭೀರವಾಗಿ ಅಧ್ಯಯನ ಮಾಡಿ ಪರಿಹರಿಸಲು ಸರ್ಕಾರ ದೃಢ ಹೆಜ್ಜೆ ಇಡಬೇಕು ಎಂದು ನಿಯೋಗ ಮನವಿ ಮಾಡಿತು.

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ನೇ ಸಾಲಿಗಾಗಿ ಮಂಡಿಸಿರುವ ಬಜೆಟ್ ನಲ್ಲಿ ಹತ್ತಿ, ಗೋಡಂಬಿ, ಕೋಕೋ, ತೆಂಗು ಮತ್ತು ಶ್ರೀಗಂಧದಂತಹ ಪ್ರಮುಖ ಬೆಳೆಗಳ ಉತ್ತೇಜನ ಮತ್ತು ವಿಸ್ತರಣೆ ಹಾಗೂ ಕೃಷಿ ವೈವಿಧ್ಯತೆ ಮತ್ತು ರಫ್ತು ಸಾಮರ್ಥ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಹಕಾರಿಯಾಗಿವೆ. ಕೃಷಿ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆಯನ್ನುಅಳವಡಿಸಿಕೊಳ್ಳುವ ಕ್ರಾಂತಿಕಾರಿ ನಿರ್ಧಾರವನ್ನು ಸ್ವಾಗತಿಸಲಾಯಿತು. ಪಶು ಸಂಗೋಪನೆಗೆ ಕ್ರೆಡಿಟ್ ಲಿಂಕ್ಡ್ ಸಬ್ಸಿಡಿ, ರೈತ ಉತ್ಪಾದಕ ಸಂಸ್ಥೆಗಳ ಬಲವರ್ಧನೆ, 500 ಜಲಾಶಯಗಳ ಅಭಿವೃದ್ಧಿ ಹಾಗೂ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಇವುಗಳೆಲ್ಲವೂ ರೈತರ ಆದಾಯ ವೃದ್ಧಿ ಮತ್ತು ಗ್ರಾಮೀಣ ಆರ್ಥಿಕ ಚೈತನ್ಯಕ್ಕೆ ಶಕ್ತಿ ತುಂಬಲಿವೆ. ಇದರಿಂದ ತೋಟಗಾರಿಕೆ, ಹಾಲು ಉತ್ಪಾದನೆ, ರೇಷ್ಮೆ ಹಾಗೂ ಇತರೆ ಕೃಷಿ ಆಧಾರಿತ ಉದ್ಯಮಗಳಿಗೆ ನೇರ ಲಾಭವಾಗಲಿದೆ. ಮತ್ತು ‘ವಿಕಸಿತ ಭಾರತ’ದ ಸಂಕಲ್ಪವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಒಂದು ಪ್ರಬಲ ಬಜೆಟ್ ಆಗಿದೆ ಎಂದು ಅಭಿನಂದಿಸಲಾಯಿತು.

ನಮ್ಮ ನಿಯೋಗದ ಮನವಿಯನ್ನು ಸಹಾನುಭೂತಿಯಿಂದ ಆಲಿಸಿದ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಕಡಾಡಿ ತಿಳಿಸಿದರು. ಅಲ್ಲದೆ, ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಶೀಘ್ರದಲ್ಲೇ ಮತ್ತೊಂದು ಸಭೆ ಕರೆದು ಸೂಕ್ತ ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿದರು ಎಂದರು.

ಈ ನಿಯೋಗದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಬಿಜೆಪಿ ರಾಷ್ಟ್ರೀಯ ಕಿಸಾನ್ ಮೋರ್ಚಾ ಅಧ್ಯಕ್ಷ ರಾಜಕುಮಾರ್ ಚಹರ್ ಕಿಸಾನ್ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಡಾ. ಅನಿಲ್ ಬೊಂಡೆ, ರಾಷ್ಟ್ರೀಯ ಉಪಾಧ್ಯಕ್ಷ ಬನ್ಸಿಲಾಲ್ ಗುರ್ಜರ್, ಪ್ರದೀಪ್ ಪುರೋಹಿತ್, ಸುಕಾಂತ ಪಾಣಿಗ್ರಾಹಿ, ಡಾ. ಶಂಭುಕುಮಾರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group