‘ಪ್ರಬುದ್ಧ ಭಾರತ’ ಮಾಸಿಕದ 125ನೇ ವಾರ್ಷಿಕೋತ್ಸವದಲ್ಲಿ ಮೋದಿ ಭಾಷಣ

Must Read

ಇದೇ ಜ. 31 ರಂದು

1896 ರಲ್ಲಿ ಸ್ವಾಮಿ ವಿವೇಕಾನಂದ ಅವರು ಪ್ರಾರಂಭಿಸಿದ ರಾಮಕೃಷ್ಣ ಮಿಷನ್ ನ ಮಾಸ ಪತ್ರಿಕೆ ‘ಪ್ರಬುದ್ಧ ಭಾರತ’ ದ 125 ನೇ ವಾರ್ಷಿಕೋತ್ಸವವನ್ನು ಉದ್ದೇಶಿಸಿ ಪ್ರಧಾನಿ  ನರೇಂದ್ರ ಮೋದಿ ಮಾತನಾಡಲಿದ್ದಾರೆ.

ಈ ಕಾರ್ಯಕ್ರಮವನ್ನು  ಮಾಯಾವತಿಯ ಅದ್ವೈತ ಆಶ್ರಮ ಆಯೋಜಿಸಿದೆ.

‘ಪ್ರಬುದ್ಧ ಭಾರತ’  ಮಾಸ ಪತ್ರಿಕೆ

ಭಾರತದ ಪ್ರಾಚೀನ ಅಧ್ಯಾತ್ಮದ ಸಂದೇಶವನ್ನು ಪ್ರಚಾರ ಮಾಡಲು ‘ಪ್ರಬುದ್ಧ ಭಾರತ’ ಪತ್ರಿಕೆ ಒಂದು ಪ್ರಮುಖ ಮಾಧ್ಯಮವಾಗಿದೆ. ಇದರ ಪ್ರಕಟಣೆಯನ್ನು ಚೆನ್ನೈನಿಂದ (ಹಿಂದಿನ ಮದ್ರಾಸ್) ಪ್ರಾರಂಭಿಸಲಾಯಿತು. ಅಲ್ಲಿ ಎರಡು ವರ್ಷಗಳವರೆಗೆ ಪತ್ರಿಕೆ ಪ್ರಕಟವಾಯಿತು. ನಂತರ ಅದನ್ನು ಅಲ್ಮೋರಾದಿಂದ ಪ್ರಕಟಿಸಲಾಯಿತು. ನಂತರ, ಏಪ್ರಿಲ್ 1899 ರಲ್ಲಿ, ಪತ್ರಿಕೆಯ ಪ್ರಕಟಣಾ ಸ್ಥಳವನ್ನು ಅದ್ವೈತ ಆಶ್ರಮಕ್ಕೆ ಸ್ಥಳಾಂತರಿಸಲಾಯಿತು. ಅಂದಿನಿಂದ ಅಲ್ಲಿಂದಲೇ ಪತ್ರಿಕೆಯನ್ನು ನಿರಂತರವಾಗಿ ಪ್ರಕಟಿಸಲಾಗುತ್ತಿದೆ.

ಹಲವಾರು ಶ್ರೇಷ್ಠ ವ್ಯಕ್ತಿಗಳು ಭಾರತೀಯ ಸಂಸ್ಕೃತಿ, ಆಧ್ಯಾತ್ಮ, ತತ್ವಶಾಸ್ತ್ರ, ಇತಿಹಾಸ, ಮನೋವಿಜ್ಞಾನ, ಕಲೆ ಮತ್ತು ಇತರ ಸಾಮಾಜಿಕ ವಿಷಯಗಳ ಕುರಿತು ‘ಪ್ರಬುದ್ಧ ಭಾರತ’ ದಲ್ಲಿ ಬರೆದಿದ್ದಾರೆ. ನೇತಾಜಿ ಸುಭಾಷ್ ಚಂದ್ರ ಬೋಸ್, ಬಾಲ ಗಂಗಾಧರ ತಿಲಕ್, ಸೋದರಿ ನಿವೇದಿತಾ, ಶ್ರೀ ಅರಬಿಂದೋ, ಮಾಜಿ ರಾಷ್ಟ್ರಪತಿ ಸರ್ವೆಪಲ್ಲಿ ರಾಧಾಕೃಷ್ಣನ್ ಮುಂತಾದವರು ಪತ್ರಿಕೆಗೆ ಬರೆದಿದ್ದಾರೆ.

ಅದ್ವೈತ ಆಶ್ರಮವು ತನ್ನ ವೆಬ್‌ಸೈಟ್‌ನಲ್ಲಿ ಸಂಪೂರ್ಣ ‘ಪ್ರಬುದ್ಧ ಭಾರತ’ ದ ಹಳೆಯ ಸಂಚಿಕೆಗಳು ಲಭ್ಯವಾಗುವಂತೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ.
ಆಧಾರ : ಪಿಐಬಿ

Latest News

ಕವನ : ಹೃದಯ ವೀಣೆ

ಹೃದಯ ವೀಣೆಶುರುವಾಗಿದೆ ಆಸೆಗಳ ಆಂದೋಲನ ಅತಿಯಾಗಿ ಹೇಳಲಾಗದೆ ಉಳಿದಿವೆ ಅದೆಷ್ಟೋ ಮಾತುಗಳು ಮುದುರಿ ಹೋಗಿವೆ ಎದೆಯ ಗೂಡೊಳಗೆ ಬಂದೊಮ್ಮೆ ಮೀಟು ಹೃದಯ ವೀಣೆ ಕಾಯುತಿವೆ ನಿನ್ನ ಬರುವಿಗಾಗಿ ಭಾವಲತೆಗಳು ನೀ ಬಂದು ಸಂತೈಸು ಮಿಡಿಯುವ ಮನವ ಬಂದುಬಿಡೊಮ್ಮೆ ಅಂತರಂಗದ ಹೂ ಬನಕೆ ಮಧುವರಿಸಿ ಬರುವ ದುಂಬಿಯಂತೆ ಮಿಲನವಾಗಲಿ ಮಧುರ ಪ್ರೇಮಕಾವ್ಯ ಕಾಯುತಿದೆ ಮನವು ಬಾಹುಬಂಧನದ ಬೆಸುಗೆ ತವಕದ...

More Articles Like This

error: Content is protected !!
Join WhatsApp Group