ಮಗುವಿನ ಜೀವ ಉಳಿಸಲು ಹೋಗಿ ಪಲ್ಟಿಯದ ಕಾರು; ಓರ್ವ ಸಾವು

Must Read

ಬೀದರ – ರಸ್ತೆಯ ಮೇಲೆ ಅಡ್ಡ ಬಂದ ಮಗುವಿನ ಜೀವ ಉಳಿಸಲು ಹೋಗಿ Scorpio ಕಾರು ಪಲ್ಟಿಯಾಗಿ ಓರ್ವ ವ್ಯಕ್ತಿ ಸಾವಿಗೀಡಾದ ಘಟನೆ ಜರುಗಿದೆ.

ಕಾರಿನಲ್ಲಿ ಇದ್ದ ಆರು ಜನರಲ್ಲಿ ಒಬ್ಬ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಇನ್ನುಳಿದ ಐದು ಜನರಿಗೆ ಕಾಲು ಮುರಿತ ಸೇರಿದಂತೆ ಗಂಭೀರ ಗಾಯಗಳಾಗಿವೆ.

ಭಾಲ್ಕಿ ತಾಲ್ಲೂಕಿನ ಸಿದ್ದಾಪುರ ಗ್ರಾಮಕ್ಕೆ ಮದುವೆ ಯಲ್ಲಿ ಭಾಗಿಯಾಗಲು ಹೋಗುವಾಗ ಈ ಘಟನೆ ನಡೆದಿದೆ. ಏಕಾಏಕಿ ರಸ್ತೆಯಲ್ಲಿ ಅಡ್ಡ ಬಂದ ಮಗುವನ್ನು ಉಳಿಸಲು ಕಾರನ್ನು ತಿರುಗಿಸಿದಾಗ ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಕಾರು ಪಲ್ಟಿಯಾಗಿದ್ದು ಅದರಲ್ಲಿ ಪ್ರಯಾಣಿಸುತ್ತಿದ್ದ ಆರು ಜನರ ಪೈಕಿ ಒಬ್ಬ ಸಾವನ್ನಪ್ಪಿದ್ದಾನೆ. ಉಳಿದ ಗಾಯಳುಗಳನ್ನು ಹುಲಸೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸೇರಿಸಲಾಗಿದೆ.

ಬೀದರ್ ಜಿಲ್ಲೆ ಹುಲಸೂರು ತಾಲ್ಲೂಕಿನ ಸೊಲದಾಬಕಾ ಗ್ರಾಮದ ಬಲಿ ನಡೆದ ಘಟನೆ ನಡೆದಿದ್ದು ಕಲಬುರಗಿ ಜಿಲ್ಲೆ ಆಳಂದ ತಾಲ್ಲೂಕಿನ ಖಜುರಿ ಗ್ರಾಮದವರು ಎನ್ನಲಾಗಿದೆ.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸಂವಿಧಾನವೇ ಆಧಾರ – ಈರಣ್ಣ ಕಡಾಡಿ

ಮೂಡಲಗಿ: ಬಲಿಷ್ಠ ಪ್ರಜಾಪ್ರಭುತ್ವ ಮೌಲ್ಯಗಳಿಗೆ ನಮ್ಮ ದೇಶದ ಶ್ರೇಷ್ಟ ಸಂವಿಧಾನವೇ ಆಧಾರ ಸ್ತಂಭವಾಗಿದೆ. ಪವಿತ್ರ ಸಂವಿಧಾನದ ಮೌಲ್ಯಗಳನ್ನು ಸದಾ ಪಾಲಿಸುವ ಜೊತೆಗೆ ದೇಶದ ಏಕತೆ, ವೈವಿಧ್ಯತೆ...

More Articles Like This

error: Content is protected !!
Join WhatsApp Group