Homeಸುದ್ದಿಗಳುಸೀರೆ ಹಂಚಿದ ಪ್ರಕರಣ; ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ವಿರುದ್ಧ ಭಾಲ್ಕಿಯಲ್ಲಿ ಪ್ರಕರಣ ದಾಖಲು

ಸೀರೆ ಹಂಚಿದ ಪ್ರಕರಣ; ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ವಿರುದ್ಧ ಭಾಲ್ಕಿಯಲ್ಲಿ ಪ್ರಕರಣ ದಾಖಲು

ಬೀದರ: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ ಕಾರ್ಯಕರ್ತರು ಮತದಾರರಿಗೆ ಸೀರೆ ಹಂಚುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾಲ್ಕಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಖಂಡ್ರೆಯವರ ಕಾರ್ಯಕರ್ತರಿಂದ ಸೀರೆ ಹಂಚುತ್ತಿದ್ದ ವೇಳೆ ಬಿಜೆಪಿ ಪಕ್ಷದ ಟಿಕೆಟ್ ಆಕಾಂಕ್ಷಿ ಡಿ ಕೆ ಸಿದ್ದರಾಮ ಹಾಗೂ ಬಿಜೆಪಿ ಕಾರ್ಯಕರ್ತರು ದಾಳಿ ಮಾಡಿ ಸೀರೆ ತೆಗೆದುಕೊಂಡು ಹೋಗುತ್ತಿದ್ದ ವಾಹನ ತಡೆದು  ಚುನಾವಣಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.

ಸ್ಥಳಕ್ಕೆ ಭಾಲ್ಕಿ ಚುನಾವಣೆ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿ ಹಂಚಲು ತಂದಿದ್ದ ವಾಹನ ಹಾಗು 370 ಸೀರೆ ಜಪ್ತಿ ಮಾಡಿದ್ದರು ಈ ಘಟನೆ ಸಂಬಂಧ ಕಾಂಗ್ರೆಸ್ ಪಕ್ಷದ ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ ಮತ್ತು ರಾಜಕುಮಾರ್ ಕಾಶಿನಾಥ್ ದೊಡ್ಮನಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ವರದಿ: ನಂದಕುಮಾರ ಕರಂಜೆ, ಬೀದರ

RELATED ARTICLES

Most Popular

close
error: Content is protected !!
Join WhatsApp Group