Homeಸುದ್ದಿಗಳುಬೆಳಗಾವಿಯ ಕಾರಂಜಿಮಠ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

ಬೆಳಗಾವಿಯ ಕಾರಂಜಿಮಠ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

ಬೆಳಗಾವಿ – ಆಗಸ್ಟ್ 9 ರಂದು ಸಾಯಂಕಾಲ 6 ಗಂಟೆಗೆ ಬೆಳಗಾವಿಯ ಕಾರಂಜಿಮಠದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘ ಮತ್ತು ಕಾರಜಿಮಠ ಬೆಳಗಾವಿ ಇವರ ಆಶ್ರಯದಲ್ಲಿ ಸಿದ್ದರಾಮಯ್ಯ ಚರಂತಿಮಠ ಇವರ ಸ್ಮರಣಾರ್ಥ ದತ್ತಿನಿಧಿ ಕಾರ್ಯಕ್ರಮ ಜರುಗಲಿದೆ.

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಕಾರಂಜಿ ಮಠದ ಶ್ರೀ ಗುರುಸಿದ್ಧ ಮಹಾಸ್ವಾಮಿಗಳು ವಹಿಸುವರು. ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ಡಾ. ಹೇಮಾವತಿ ಸೋನೊಳ್ಳಿ ಅಧ್ಯಕ್ಷತೆ ವಹಿಸುವರು.

ಅತಿಥಿಗಳಾಗಿ ಅಪರ ಪ್ರಾದೇಶಿಕ ಆಯುಕ್ತರಾದ ನಜಮಾ ಪೀರಜಾದೆ, ದಾನಿಗಳಾದ ಡಾ. ನೀಲಗಂಗಾ ಚರಂತಿಮಠ ಆಗಮಿಸುವರು ಎಂದು ಲೇಖಕಿಯರ ಸಂಘದ ಕಾರ್ಯದರ್ಶಿ ರಾಜನಂದಾ ಗಾರ್ಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

Most Popular

error: Content is protected !!
Join WhatsApp Group