- Advertisement -
ಬೀದರ – ಮಾರಕಾಸ್ತಗಳಿಂದ ತಲೆಗೆ ಹಲ್ಲೆ ಮಾಡಿ ಅಪರಿಚಿತರು ವ್ಯಕ್ತಿಯೊಬ್ಬರ ಭೀಕರ ಕೊಲೆ ಮಾಡಿರುವ ಘಟನೆ ಗಡಿ ಜಿಲ್ಲೆ ಬೀದರನಲ್ಲಿ ನಡೆದಿದೆ.
ದೇವೇಂದ್ರ ( 40 ) ಕೊಲೆಯಾದ ವ್ಯಕ್ತಿ.
ಬೀದರ್ ತಾಲೂಕಿನ ಚಿಟ್ಟಾ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು ಮೂಲತಃ ಬೀದರ್ ತಾಲೂಕಿನ ಶಾಪೂರ್ ಗೇಟ್ ನಿವಾಸಿಯಾಗಿರುವ ದೇವೇಂದ್ರ ಕೆಲಸ ಮುಗಿಸಿಕೊಂಡು ಮನೆಗೆ ಬರುವಾಗ ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.
- Advertisement -
ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಗಾಂಧಿಗಂಜ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ವರದಿ: ನಂದಕುಮಾರ ಕರಂಜೆ, ಬೀದರ