ಭಾರಿ ಅಗ್ನಿ ಅವಘಡ ; ಅಪಾರ ಈರುಳ್ಳಿ ಬೀಜ ಹಾನಿ

Must Read

ಬೀದರ – ಶಾಟ್ ಸರ್ಕ್ಯೂಟ್ ನಿಂದಾಗಿ ಗೋಡೌನ್ ಗೆ ಬೆಂಕಿ ಬಿದ್ದು ಉಂಟಾದ ಅಗ್ನಿ ಅವಘಡದಲ್ಲಿ ಅಲ್ಲಿ ಸಂಗ್ರಹಿಸಲಾಗಿದ್ದ ಈರುಳ್ಳಿ ಬೀಜಗಳು ಸಂಪೂರ್ಣ ನಾಶಗೊಂಡ ಘಟನೆ ಜರುಗಿದೆ.

ಬೀದರ ತಾಲೂಕಿನ ಬಗದಲ್ ಗ್ರಾಮದ ಪಾಕಿಸೇಠ್ ಎಂಬ ಮಾಲೀಕರಿಗೆ ಸೇರಿದ ಈರುಳ್ಳಿ ಬೀಜದ ಗೋಡೌನ್ ನಲ್ಲಿ ಬೆಂಕಿ ಹೊತ್ತಿಕೊಂಡು ಸುಮಾರು 20 ರಿಂದ 30 ಲಕ್ಷಕ್ಕೂ ಅಧಿಕ ಮೌಲ್ಯದ ಈರುಳ್ಳಿ ಬೀಜಗಳು ಅಗ್ನಿ ಆಹುತಿಯಾಗಿವೆ.

ಜಿಲ್ಲೆ, ಅಂತರ ಜಿಲ್ಲೆ, ರಾಜ್ಯ ಹಾಗೂ ಅಂತರ್ ರಾಜ್ಯಕ್ಕೆ ಇಲ್ಲಿಂದಲ್ಲೇ ಈರುಳ್ಳಿ ಬೀಜ ರಪ್ತು ಮಾಡುತ್ತಿದ್ದ ಮಾಲೀಕ ಪಾಕಿಸೇಠ್‌.

ಲಕ್ಷಾಂತರ ಮೌಲ್ಯದ ಈರುಳ್ಳಿ ಬೀಜ ಕಳೆದುಕೊಂಡು ಕಂಗಾಲಾಗಿದ್ದಾರೆ.

ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಿಲು ಅಗ್ನ ಶಾಮಕ ದಳದ ಸಿಬ್ಬಂದಿಗಳು ಹರಸಾಹಸ ಪಟ್ಟರು.

ಬಗದಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ತನಿಖೆ ನಡೆಸಿದ್ದಾರೆ.


ವರದಿ : ನಂದಕುಮಾರ ಕರಂಜೆ, ಬೀದರ

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...

More Articles Like This

error: Content is protected !!
Join WhatsApp Group