ಬೀದರ್ ನಲ್ಲಿ ಮೂರು ಕಡೆ ಎಸಿಬಿ ದಾಳಿ…

Must Read

ಬೀದರ – ಗಡಿ ಜಿಲ್ಲೆ ಬೀದರ್ ನಲ್ಲಿ ಬೆಳಂಬೆಳಗ್ಗೆ ಎಸಿಬಿ ಪೊಲೀಸರಿಂದ ಏಕ‌ ಕಾಲದಲ್ಲಿ ಮೂರು ಕಡೆಗಳಲ್ಲಿ ದಾಳಿ ಮಾಡಲಾಗಿದೆ.

ಬೀದರ್ ಜಿಲ್ಲೆಯ ಬಸವ ಕಲ್ಯಾಣದ ಶಿವಾಜಿ ನಗರದ ನಿವಾಸ ಪ್ರದೇಶಗಳನ್ನು, ಭಾಲ್ಕಿ ತಾಲೂಕಿನ ಮೇಹಕರ್ ನ ನಿವಾಸ ಹಾಗೂ ಮೇಹಕರ್ ಗ್ರಾಮದ ಪೆಟ್ರೋಲ್ ಪಂಪ್ ಸೇರಿದಂತೆ ಏಕ ಕಾಲಕ್ಕೆ ಮೂರು ಕಡೆ ಎಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.

ಜಿಲ್ಲಾ ಪಂಚಾಯತ್ ಬಸವಕಲ್ಯಾಣ ವಿಭಾಗದಲ್ಲಿ ಗ್ರಾಮೀಣ ಕುಡಿಯುವ ನೀರು ಯೋಜನೆಯ ಕಿರಿಯ ಅಭಿಯಂತರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸುರೇಶ್ ಮೋರೆ ನಿವಾಸದ ಮೇಲೆ ದಾಳಿಯಾಗಿದೆ.

ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನೆಲೆಯಲ್ಲಿ ಬೀದರ್ ಎಸಿಬಿ ಪೊಲೀಸರು ದಾಳಿ ಮಾಡಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ… ಎಸಿಬಿ ಎಸ್ಪಿ ಮಹೇಶ್ ಮಘಣ್ಣನವರ್ ಮಾರ್ಗದರ್ಶನದಲ್ಲಿ ಈ ದಾಳಿ ಮಾಡಲಾಗಿದೆ.

ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

Latest News

ಕವನ : ಪ್ರೀತಿಸಿದ ತಪ್ಪಿಗೆ

ಪ್ರೀತಿಸಿದ ತಪ್ಪಿಗೆ... ಇಂದು ಈ ಮುಸ್ಸಂಜೆಯಲಿ.... ಯಾರೋ ಎಲ್ಲೋ ಪ್ರೀತಿಸುವ ಹೃದಯಕೆ ನೋವುಣಿಸಿರಬೇಕು... ಅಕಾಲದಲ್ಲಿ ಆಕಾಶ ಆರ್ಭಟಿಸಿ ಭೋರ್ಗರೆದು ಹೀಗೆ ಸುರಿಯಬೇಕಾದರೆ... ಸದ್ದಿಲ್ಲದೇ ಒಡೆದ ಎದೆ ತುಣುಕುಗಳು ಮುಗಿಲಲಿ ಶೋಕಗೀತೆ ನುಡಿಸುತಿವೆ....ಯಾರೋ ಎಲ್ಲೋ ಹೂವಂತ ಮನಸನು ಮಾತಿನ ಮುಳ್ಳುಗಳಿಂದ ಚುಚ್ಚಿ ನೋಯಿಸಿರಬೇಕು... ಹೆಪ್ಪುಗಟ್ಟಿದ ದುಃಖ ಕಪ್ಪು ಮೋಡದ ಒಡಲ ಬಗೆದು...

More Articles Like This

error: Content is protected !!
Join WhatsApp Group