ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Must Read

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಗಳಾದ ಜಗದೀಶ ಹಳೇಮನಿ ಹಾಗೂ ಗಾಣಿಗ ನೌಕರರ ಅಭಿವೃದ್ಧಿ ಸಂಘದ ಅಧ್ಯಕ್ಷರಾದ ಶ್ರೀ ಗಂಗಪ್ಪ ಗ ಹೆಬ್ಬಳ್ಳಿ ಹಾಗೂ ಪ್ರಧಾನ ಕಾರ್ಯದರ್ಶಿ ವಾಯ್ ಬಿ ಕಡಕೋಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆೆ.

ಸವದತ್ತಿಯ ಜ್ಯೋತಿ ಅರ್ಬನ್ ಸೊಸೈಟಿಯ ಸಭಾ ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು ದಿನಾಂಕ ವನ್ನು ನಂತರ ತಿಳಿಸಲಾಗುವುದು ಹಾಗೂ 2019-20 ಮತ್ತು 2020-21 ರ ಪರೀಕ್ಷೆಯಲ್ಲಿ ಎಸ್.ಎಸ್.ಎಲ್.ಸಿ.ಶೇ 85% ಹಾಗೂ ಪಿ.ಯು.ಸಿ.ಯಲ್ಲಿ ಶೇ 80 ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪುರಸ್ಕಾರ ಮಾಡಲಾಗುವದು ಕಾರಣ ಸವದತ್ತಿ ತಾಲೂಕಿನ ಗಾಣಿಗ ಸಮಾಜದ ವಿದ್ಯಾರ್ಥಿಗಳು ಮಾತ್ರ ತಮ್ಮ ಅಂಕಪಟ್ಟಿ ಹಾಗೂ ಆಧಾರ ಕಾರ್ಡ ಝರಾಕ್ಸ್ ಪ್ರತಿಯೊಂದಿಗೆ ಸವದತ್ತಿ ಜ್ಯೋತಿ ಅರ್ಬನ್ ಸೊಸಾಯಿಟಿಯಲ್ಲಿ ದಿನಾಂಕ 10/11/2021 ರ ಒಳಗಾಗಿ ತಂದು ಕೊಡಬೇಕೆಂದು ಸವದತ್ತಿ ತಾಲೂಕಿನ ಗಾಣಿಗ ನೌಕರರ ಸಂಘದ ಅಧ್ಯಕ್ಷರಾದ ಗಂಗಪ್ಪ ಗ. ಹೆಬ್ಬಳ್ಳಿ ಅವರು ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕು.

ಜ್ಯೋತಿ ಅರ್ಬನ್ ಕೋ ಆಪ್ ಕ್ರೆಡಿಟ್ ಸೊಸೈಯಿಟಿ ಸವದತ್ತಿ 08330-223238 ಮತ್ತು ಸವದತ್ತಿ ತಾಲೂಕಿನ ಗಾಣಿಗ ನೌಕರರ ಸಂಘದ ಅಧ್ಯಕ್ಷರಾದ ಗಂಗಪ್ಪ ಗ ಹೆಬ್ಬಳ್ಳಿ 9889735255 ಹಾಗೂ ಪ್ರಧಾನ ಕಾರ್ಯದರ್ಶಿಗಳು ವಾಯ್ ಬಿ ಕಡಕೋಳ 8971117442 ಗಾಣಿಗ ಸಮಾಜದ ತಾಲೂಕು ಘಟಕದ ಕಾರ್ಯದರ್ಶಿಗಳಾದ ಜಗದೀಶ ಹಳೇಮನಿ 9448421116 ಇವರನ್ನು ಸಂಪರ್ಕಿಸಲು ತಿಳಿಸಲಾಗಿದೆ.

- Advertisement -
- Advertisement -

Latest News

ಪುಸ್ತಕ ಪರಿಚಯ

ಪುಸ್ತಕದ ಹೆಸರು :- "ಬಸವ ಜನ್ಮಸ್ಥಳ ಬಸವನಬಾಗೇವಾಡಿ ಕ್ಷೇತ್ರ ಚರಿತ್ರೆ"ಲೇಖಕರು :- ಮುರುಗೇಶ ಸಂಗಮ (೯೪೪೯೪೩೭೬೦೪) ಬೆಲೆ :- ೧೧೦ನಮ್ಮ ಜ್ಞಾನ ವಿಸ್ತರವಾಗಬೇಕಾದರೆ ಪುಸ್ತಕ ಓದುವ ಹವ್ಯಾಸ...
- Advertisement -

More Articles Like This

- Advertisement -
close
error: Content is protected !!
Join WhatsApp Group