spot_img
spot_img

ಹಿಂದೂ ವಿರೋಧಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

Must Read

- Advertisement -

ಸಿಂದಗಿ: ಹಿಂದೂ ದೇವಸ್ಥಾನಗಳ ತಸ್ತಿಕ್ ಭತ್ಯೆಯ ಅನುದಾನವನ್ನು ಅನ್ಯ ಮತಿಯರ ಧಾರ್ಮಿಕ ಸ್ಥಳಗಳಿಗೆ ಬಿಡುಗಡೆ ಮಾಡಿರುವದನ್ನು ತಡೆ ಹಿಡಿದ ರಾಜ್ಯ ಸರಕಾರಕ್ಕೆ ಆಭಾರಮನ್ನಣೆ ಮತ್ತು ಇದಕ್ಕೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಬೇಕೆಂದು ಹಿಂದೂ ಜನ ಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ ಗೌಡಾ ಆಗ್ರಹಿಸಿದ್ದಾರೆ

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆಯ ಅನುದಾನದಿಂದ ೨೦೨೧-೨೨ ಸಾಲಿನ ತಸ್ತಿಕ ಭತ್ಯೆಯ ರೂಪದಲ್ಲಿ ೩೦ ಕ್ಕೂ ಅಧಿಕ ಅನ್ಯಮತೀಯರ ಪ್ರಾರ್ಥನಾ ಸ್ಥಳಗಳಿಗೆ ೧೩.೫೦ ಲಕ್ಷ ರೂ.ಗಳನ್ನು ನೀಡಲಾಗಿತ್ತು. ತದನಂತರ ಹಿಂದೂಗಳ ವಿರೋಧದಿಂದ ಈ ಆದೇಶವನ್ನು ಮುಜರಾಯಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಯವರು ತಡೆ ಹಿಡಿಯಲು ಆದೇಶ ನೀಡಿದ್ದಾರೆ.

ತಮ್ಮ ಗಮನಕ್ಕೆ ಬಂದ ತಕ್ಷಣ ತತ್ಪರತೆಯಿಂದ ಆದೇಶವನ್ನು ತಡೆ ಹಿಡಿಯುವಂತೆ ಆದೇಶ ನೀಡಿದ್ದಕ್ಕಾಗಿ ಮಾನ್ಯ ಕೋಟಾ ಶ್ರೀನಿವಾಸ ಪೂಜಾರಿಯವರಿಗೆ ಹಿಂದೂ ಜನಜಾಗೃತಿ ಸಮಿತಿಯು ಅಭಿನಂದನೆಗಳನ್ನು ಸಲ್ಲಿಸುತ್ತದೆ.

- Advertisement -

ಆದರೆ ಧಾರ್ಮಿಕ ದತ್ತಿ ಇಲಾಖೆಯಲ್ಲಿ ಇಂತಹ ತಪ್ಪುಗಳ ಪುನರಾವರ್ತನೆಯಾಗುತ್ತಿರುತ್ತದೆ. ಫೆಬ್ರವರಿ 2021 ರಲ್ಲಿ ಬೆಳಗಾವಿಯ 16 ಹಿಂದೂ ದೇವಸ್ಥಾನಗಳನ್ನು ವಶಪಡಿಸಿ ಸರಕಾರೀಕರಣಗೊಳಿಸಲು ಆದೇಶವನ್ನು ಹೊರಡಿಸಲಾಗಿತ್ತು.

ತದನಂತರ ಭಕ್ತರ ವಿರೋಧದಿಂದ ಆದೇಶವು ರದ್ದಾಯಿತು. ಹಾಗಾಗಿ ಇಂತಹ ತಪ್ಪುಗಳನ್ನು ಮಾಡುವ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ ಗೌಡ ಆಗ್ರಹಿಸಿದ್ದಾರೆ.

- Advertisement -
- Advertisement -

Latest News

ನಮ್ಮ ಊರ ಜಾತ್ರೆಯೊಂದನ್ನು ನಿಮ್ಮ ಬದುಕಿನ ಯಾತ್ರೆಗೆ ಹೋಲಿಸುತ್ತ….

ಹಾಯ್, ಹಲೋ, ನಮಸ್ಕಾರ...ಸ್ನೇಹಿತರೆ ನೀವೆಲ್ಲ ಹೇಗಿದ್ದೀರಿ? ಬಹಳಷ್ಟು ಜನ ಪರವಾಗಿಲ್ಲ ಚೆನ್ನಾಗಿದ್ದೀವಿ ಅಂತೀರಿ ಇನ್ನು ಕೆಲವಷ್ಟು ಜನ ಅಯ್ಯೋ ಅದ್ ಏನ್ ಕೇಳ್ತೀರಾ ಬಿಡಿ ಅನ್ನುವಂತಹ...
- Advertisement -

More Articles Like This

- Advertisement -
close
error: Content is protected !!
Join WhatsApp Group