ಶಿಡ್ಲಘಟ್ಟ ಪ್ರಕರಣ : ಯಾರೇ ಇದ್ದರೂ ನಿರ್ದಾಕ್ಷಿಣ್ಯ ಕ್ರಮ – ಸಲೀಂ ಅಹ್ಮದ

Must Read

ಬೀದರ – ಮಹಿಳೆಯರ ಮೇಲೆ ಯಾರೇ ಅನ್ಯಾಯ ಮಾಡಿದರೂ, ತಪ್ಪು ಮಾಡಿದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ. ಶಿಡ್ಲಘಟ್ಟ ಪ್ರಕರಣದಲ್ಲಿ ಈಗಾಗಲೇ ಎಫ್ಆಯ್ಆರ್ ಆಗಿದೆ ಎಷ್ಟೇ ದೊಡ್ಡ ವ್ಯಕ್ತಿಯಾದರೂ ಪೊಲೀಸರು ಬಂಧಿಸುತ್ತಾರೆ ಕ್ರಮ ಜರುಗಿಸುತ್ತಾರೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಯಾರನ್ನೂ ಸಮರ್ಥನೆ ಮಾಡುವುದಿಲ್ಲ ಯಾರೇ ತಪ್ಪುಮಾಡಿದರೂ ಅದು ತಪ್ಪೇ ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದರು.
ರಾಜ್ಯದಲ್ಲಿ ಸಿಎಂ ಡಿಸಿಎಂ ಸಂಕ್ರಾಂತಿ ಕ್ರಾಂತಿಯ ಬಗ್ಗೆ ಚರ್ಚೆಯ ವಿಚಾರ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ಇಬ್ಬರ ಜೊತೆ ಮಾತನಾಡಿದ್ದಾರೆ ಅಧಿವೇಶನ ಮುಗಿದ ಮೇಲೆ ಹೈಕಮಾಂಡ್ ಈ ವಿಷಯ ಚರ್ಚೆ ಮಾಡುತ್ತದೆ ಎಂದರು.

ವರದಿ : ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group