spot_img
spot_img

ಪ್ರಜಾಧ್ವನಿ ಸಮಾವೇಶ ಮುಂದೂಡಿಕೆ

Must Read

- Advertisement -

ಮೂಡಲಗಿ: ಪಟ್ಟಣದ ಶ್ರೀ ಬಸವ ರಂಗ ಮಂಟಪದ ಮೈದಾನದಲ್ಲಿ ಮಾ.15ರಂದು ನಿಗದಿಗೊಂಡ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ದ್ರುವನಾರಾಯಣ ನಿಧನದಿಂದಾಗಿ ಮಾ. 17ಕ್ಕೆ ಮುಂದೂಡಲಾಗಿತ್ತು.

ಆದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ನಡೆಯಲಿರುವ ಸ್ಕ್ರೀನಿಂಗ್ ಕಮಿಟಿ ಸಭೆಗೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಮಾ.17ರಂದು ಮೂಡಲಗಿಯಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆಯ ಕಾರ್ಯಕ್ರಮವನ್ನು ಮತ್ತೇ ತಾತ್ಕಾಲಿವಾಗಿ ಮುಂದೂಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಅರವಿಂದ ದಳವಾಯಿ ತಿಳಿಸಿದ್ದಾರೆ.

ಸಮಾವೇಶ ನಡೆಸುವ ಕುರಿತು ಈಗಾಗಲೆ ಎಲ್ಲ ತಯಾರಿಯನ್ನು ಮಾಡಿಕೊಳ್ಳಲಾಗಿತ್ತು ಆದರೆ ಅನಿವಾರ್ಯ ಕಾರಣದಿಂದ ಮುಂದೂಡಲಾದ ಪ್ರಜಾಧ್ವನಿ ಯಾತ್ರೆಯ ಸಮಾವೇಶವನ್ನು ಶೀಘ್ರದಲ್ಲಿ ಕೈಗೊಳ್ಳಲಾಗುತ್ತದೆ ಮತ್ತು ಕೂಡಲೇ ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.

- Advertisement -
- Advertisement -

Latest News

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧಾರವಾಡ ಪ್ರಾದೇಶಿಕ ವಿಭಾಗಕ್ಕೆ ನಿರ್ದೇಶಕರಾಗಿ ಶ್ರೀಮತಿ ದಯಾಶೀಲ 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧಾರವಾಡ ಪ್ರಾದೇಶಿಕ ವಿಭಾಗಕ್ಕೆ ಬೆಳ್ತಂಗಡಿ ಮೂಲದ ಶ್ರೀಮತಿ ದಯಾಶೀಲರವರು ಧರ್ಮಸ್ಥಳದ ಪೂಜ್ಯ ವೀರೇಂದ್ರ ಹೆಗಡೆಯವರ ಆಶೀರ್ವಾದದೊಂದಿಗೆ ಯೋಜನೆಯ ಮುಖ್ಯ...
- Advertisement -

More Articles Like This

- Advertisement -
close
error: Content is protected !!
Join WhatsApp Group