ಸಮಾಜ ಸೇವಕ ಅಪ್ರೋಜ ಪಾಷಾ ಸನ್ಮಾನ

Must Read

ಬಾಗಲಕೋಟೆ – ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಸಹಯೋಗದಲ್ಲಿ ರೋಟರಿ ಬೆಂಗಳೂರು ಎಚ್ ಎಸ್ ಆರ್ ಕ್ಲಬ್ ಆಯೋಜಿಸಿದ್ದ ಸೈನಿಕರೊಂದಿಗೆ ರಕ್ಷಾಬಂಧನದ ಸಂದರ್ಭದಲ್ಲಿ ಬೆಂಗಳೂರಿನ ಯಶವಂತಪುರದ ನಿವಾಸಿ ಸಮಾಜ ಸೇವಕ ಅಪ್ರೋಜ ಪಾಷಾ ಅವರನ್ನು ಸನ್ಮಾನಿಸಲಾಯಿತು.

ಅವರು ಸಮಾಜಕ್ಕೆ ವಿವಿಧ ರೀತಿಯಲ್ಲಿ ತಮ್ಮ ನಿಸ್ವಾರ್ಥ ಸೇವೆಯನ್ನು ನೀಡಿರುವುದನ್ನು ಗುರುತಿಸಿ ಸಂಘದ ಪ್ರಮುಖರಾದ ಡಾ. ಶಿವಣ್ಣ ಎಂ ಕ್ಯಾಪ್ಟನ್ ಗುರು ನಾಯಕ್ ಕ್ಯಾಪ್ಟನ್ ವೀರಪ್ಪ ಮೇಜರ್ ವಿನಾಯಕ್ ಇತರೆ ಸದಸ್ಯರು ಸನ್ಮಾನಿಸಿದರು

ಸನ್ಮಾನ ಪರ ಅಪ್ರೋಚ್ ಪಾಷಾ ಮಾತನಾಡಿ, ಸಮಾಜಕ್ಕೆ ವಿವಿಧ ರೀತಿಯಲ್ಲಿ ನನ್ನ ವಿಶ್ವಾಸ ಸೇವೆಯನ್ನು ಗುರುತಿಸಿ ನನ್ನನ್ನು ಸನ್ಮಾನಿಸಿದ ಸಂಘದ ಪದಾಧಿಕಾರಿಗಳಿಗೆ ಕೃತಜ್ಞನಾದ್ದೇನೆ ಎಂದರಲ್ಲದೆ ಸಮಾಜ ಸೇವೆ ಮಾಡಲು ಬಡವರ ದೀನದಲಿತರ ಪರವಾಗಿ ನಿಸ್ವಾರ್ಥದಿಂದ ಕೆಲಸ ಮಾಡುತ್ತಿದ್ದೇನೆ. ಸನ್ಮಾನ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ ನಾನು ಇನ್ನೂ ಸಮಾಜ ಸೇವೆ ಮಾಡಲೆಂದು ಪ್ರೋತ್ಸಾಹಿಸಲು ನನ್ನನ್ನು ಸನ್ಮಾನ ಮಾಡಿದ್ದಿರೆಂದು ನಾನು ಅಂದುಕೊಂಡಿದ್ದೇನೆ ಎಂದು ನುಡಿದರು.

ಮುಂದುವರೆದು ರಾಷ್ಟ್ರಕ್ಕಾಗಿ ಸಾಯಲು ಸಿದ್ದರಾಗಿರುವ ಸೈನಿಕರ ಕಾರ್ಯ ಶ್ಲಾಘನೀಯವಾಗಿದೆ ಎಂದ ಅವರು ದೇಶ ನಮಗೇನು ಕೊಟ್ಟಿದೆ ಎನ್ನುವುದಕ್ಕಿಂತ ದೇಶಕ್ಕಾಗಿ ನಾವೇನು ಶ್ರಮಿಸಿದ್ದೇವೆ ಎಂಬುದನ್ನು ತಿಳಿದುಕೊಂಡು ಎಲ್ಲರೂ ದೇಶಾಭಿಮಾನವನ್ನು ರೂಡಿಸಿಕೊಳ್ಳುವುದು ಇಂದು ಅವಶ್ಯವಾಗಿದೆ ಇಂದಿನ ಯುವಕರಲ್ಲಿ ರಾಷ್ಟ್ರ ಅಭಿಮಾನವನ್ನು ರೂಡಿಸಿಕೊಳ್ಳಬೇಕೆಂದು ಅವರು ಕರೆ ನೀಡಿದರು

Latest News

ಗಡಿಗಳನ್ನು ಮೀರಿ ಹರಿದ ಭಕ್ತಿ: ಓಮಾನ್‌ನಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ವೈಭವ  

     ಗಡಿಗಳನ್ನು ಮೀರಿ ಹರಿಯುವ ಭಕ್ತಿಯ ಹರಿವು ಮಸ್ಕಟ್‌ನಲ್ಲಿ ಮತ್ತೆ ಒಮ್ಮೆ ತಿರುಮಲೆಯ ಸಾನ್ನಿಧ್ಯವನ್ನು ಮೂಡಿಸಿತು. ದಾರ್ಸೈಟ್‌ನ ಶ್ರೀ ಕೃಷ್ಣ ಮಂದಿರದಲ್ಲಿ ನೆರವೇರಿದ ಶ್ರೀ...

More Articles Like This

error: Content is protected !!
Join WhatsApp Group