ಮಧ್ಯಾಹ್ನ ಉಪಾಹಾರ ಯೋಜನೆ ಸಹನಿರ್ದೇಶಕರ ಭೇಟಿ, ಪರಿಶೀಲನೆ

Must Read

ಮೂಡಲಗಿ: ಪೌಷ್ಠಿಕಾಂಶಯುಳ್ಳ ಆಹಾರ ಸೇವನೆಯಿಂದ ಮಕ್ಕಳ ದೈಹಿಕ ಬೆಳವಣಿಕೆಯ ಜೊತೆಗೆ ಶೈಕ್ಷಣಿಕ ಕಾರ್ಯಚಟುವಟಿಕೆಗಳಲ್ಲಿ ಉತ್ಸಾಹದಿಂದ ತೊಡಗಲು ಸಾಧ್ಯವಾಗುವುದು ಎಂದು ತಾಲೂಕಾ ಮಧ್ಯಾಹ್ನ ಉಪಾಹಾರ ಯೋಜನೆಯ ಸಹನಿರ್ದೇಶಕ ಎ.ಬಿ ಮಲಬನ್ನವರ ಹೇಳಿದರು.

ಅವರು ಪಟ್ಟಣದ ವಿಜಯನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಾತನಾಡಿ, ಮೂಡಲಗಿ ಶೈಕ್ಷಣಿಕ ವಲಯವು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಹೆಸರು ಹೊಂದಲು ಶಿಕ್ಷಕರ, ಪಾಲಕರ, ವಿದ್ಯಾರ್ಥಿಗಳ ಹಾಗೂ ಚುನಾಯಿತ ಪ್ರತಿನಿಧಿಗಳ ಸಹಕಾರ ಮುಖ್ಯವಾಗಿದೆ. ಮಕ್ಕಳಿಗೆ ಪೌಷ್ಠಿಕಾಂಶವುಳ್ಳ ಆಹಾರದ ಜೊತೆಯಲ್ಲಿ ವಲಯಾದ್ಯಂತ ವಿಶೇಷ ಭೋಜನ ವ್ಯವಸ್ಥೆ ಮಾಡುತ್ತಿರುವದು ಮೆಚ್ಚುವಂತಹದು. ಕಲಿಕೆಗೆ ಪೂರಕವಾಗಿ ಗುಣಮಟ್ಟದ ಆಹಾರ ಮುಖ್ಯವಾಗಿದೆ. ಮಕ್ಕಳ ಸರ್ವಾಂಗೀಣ ಅಭಿವೃದ್ದಿಯಲ್ಲಿ ಪೌಷ್ಠಿಕ ಆಹಾರ ಮುಖ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಮೂಡಲಗಿ ಸಂಪನ್ಮೂಲ ವ್ಯಕ್ತಿ ಸಮೀರಅಹ್ಮದ ದಬಾಡಿ, ಮುಖ್ಯ ಗುರುಗಳಾದ ಎಸ್.ವಿ ಸೋಮವ್ವಗೋಳ, ಭಾರತಿ ದಾಸ್ತಿಕೊಪ್ಪ, ಮಗದುಮ, ಎಸ್.ಎಚ್ ಯಂಡ್ರಾವಿ, ಎಸ್.ಬಿ ಕಳ್ಳಿಗುದ್ದಿ, ಸುರೇಶ ಕೋಪರ್ಡೆ, ಶಿಕ್ಷಕರಾದ ಎಲ್.ಆರ್ ಲಮಾಣಿ, ಎಸ್.ಎಸ್ ಕಿತ್ತೂರ, ಶಶಿಕಲಾ ಕುಲಕರ್ಣಿ, ಎಸ್.ಎ ನಿಂಬರ್ಗಿ ಹಾಗೂ ಎಸ್.ಡಿ.ಎಮ್.ಸಿ ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Latest News

ಲೇಖನ : ಒತ್ತಡದ ಬದುಕಿಗೆ ನೆಮ್ಮದಿಯ ಔಷಧಿ

ಅತ್ಯಾಧುನಿಕ ತಂತ್ರಜ್ಞಾನದಿಂದಾಗಿ ನಮ್ಮ ಹಿಂದಿನ ಹಿರಿಯರು ಪಡುತ್ತಿದ್ದ ಶ್ರಮಜೀವನ ಈಗಿಲ್ಲ. ಆದರೂ ವರ್ಗ ವಯಸ್ಸು ಲಿಂಗಭೇದವನ್ನು ಲೆಕ್ಕಿಸದೇ ದಿನದಿಂದ ದಿನೇ ಒತ್ತಡ ಹೆಚ್ಚುತ್ತಲೇ ಇದೆ. ಶಾಂತವಿರಬೇಕೆನ್ನುವ...

More Articles Like This

error: Content is protected !!
Join WhatsApp Group