spot_img
spot_img

ರೈತರ ಮೇಲೆ ಕಾಂಗ್ರೆಸ್ ಸರ್ಕಾರದ ಹಲ್ಲೆ ಖಂಡಿಸಿ ಸಿಂದಗಿಯಲ್ಲಿ ಪ್ರತಿಭಟನೆ

Must Read

spot_img
- Advertisement -

ಸಿಂದಗಿ; ಕೂಡಲಸಂಗಮ ಪ್ರಥಮ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದ ಪಂಚಮಸಾಲಿ- ದೀಕ್ಷಾ ಮಲೆಗೌಡ- -ಗೌಡಲಿಂಗಾಯತರಿಗೆ ೨ಎ ಹಾಗೂ ಲಿಂಗಾಯತ ಓಬಿಸಿ ಮೀಸಲಾತಿಗಾಗಿ ಡಿ ೧೦ ರಂದು ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಚಳವಳಿಗಾರರ ಮೇಲೆ ಆಡಳಿತಾರೂಢ ಸರ್ಕಾರ ಮಾಡಿದ ಮಾರಣಾಂತಿಕ ಹಲ್ಲೆ ಖಂಡಿಸಿ ತಾಲೂಕು ಪಂಚಮಸಾಲಿ ಸಮಾಜದ ಕಾರ್ಯಕರ್ತರು ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ ಸರಕಾರದ ವಿರುದ್ದ ಘೋಷಣೆ ಕೂಗಿದರು.

ನಂತರ ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ ಅವರ ಮುಖಾಂತರ ಜಿಲ್ಲಾಧಿಕಾರಿಗಳಿಗೆ, ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ತಾಲೂಕಾಧ್ಯಕ್ಷ ಎಂ.ಎಂ.ಹಂಗರಗಿ ಮಾತನಾಡಿ, ಕೂಡಲಸಂಗಮದ ಪಂಚಮಸಾಲಿ ಜಗದ್ಗುರು ಮಹಾಪೀಠದ ಪ್ರಥಮ ಜಗದ್ಗುರುಗಳಾದ ಶ್ರೀ ಬಸವ ಜಯ ಮೃತ್ಯುಂಜಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಲಿಂಗಾಯಿತ ಪಂಚಮಸಾಲಿ ಸಮುದಾಯದ ೨ ಎ ಮೀಸಲಾತಿ ಹೋರಾಟವನ್ನು ಬೆಳಗಾವಿಯ ಸುವರ್ಣ ವಿಧಾನ ಸೌಧದ ಮುಂಭಾಗದಲ್ಲಿ ಕಳೆದ ೧೦ ರಂದು ಹಮ್ಮಿಕೊಳ್ಳಲಾಗಿತ್ತು ಆ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನೆ ನಿಯಂತ್ರಿಸಲು ದುರುದ್ದೇಶದಿಂದ ಲಾಠಿಚಾರ್ಜ್ ನೆಪದಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಸುಮಾರು ಸಾವಿರಾರು ಜನರಿಗೆ ಗಂಭೀರ ಗಾಯಗಳಾಗಿದ್ದು, ನೂರಕ್ಕೂ ಹೆಚ್ಚು ಹೋರಾಟಗಾರರ ಜೀವನ ಚಿಂತಾ ಜನಕವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ ಸಾಕಷ್ಟು  ಜನರು ದುಃಖವನ್ನು ಅನುಭವಿಸುತ್ತಿದ್ದಾರೆ. ಹೋರಾಟಗಾರರ ಮೇಲೆ ಪೊಲೀಸರು ಮಾರಣಾಂತಿಕ ಹಲ್ಲೆಯನ್ನು ಸಮಸ್ತ ತಾಲೂಕು ಲಿಂಗಾಯತ ಪಂಚಮಸಾಲಿ ಸಮಾಜ ತೀವ್ರವಾಗಿ ಖಂಡಿಸುತ್ತದೆ. ಅಂದು ೧೨ ನೇ ಶತಮಾನದಲ್ಲಿ ಮಂತ್ರಿ ಕೊಂಡಿಮಂಚಣ್ಣ ಲಿಂಗಾಯತರ ಮೇಲೆ ಹತ್ಯೆ ಮಾಡಿಸಿದ್ದರು. ಅದೇ ರೀತಿಯಾಗಿ ಇಂದು ೨೧ನೇ ಶತಮಾನದಲ್ಲಿ ಲಿಂಗಾಯತ ವಿರೋಧಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲಕ್ಷಾಂತರ ಪಂಚಮಸಾಲಿಗಳ ಮೇಲೆ ಗುಂಡಾಗಿರಿ ಹಾಗೂ ಲಾಟಿಚಾರ್ಜ್ ಮಾಡಿಸಿ ನಮ್ಮ ರಕ್ತ ಹರಿಸಿದ್ದಾರೆ. ಇಂತಹ ಕ್ರೂರ ಕೃತ್ಯಕ್ಕೆ ಕಡಿವಾಣ ಹಾಕಬೇಕು. ಲಿಂಗಾಯತರ ಹೋರಾಟ ಹತ್ತಿಕ್ಕುವ ಹುನ್ನಾರದ ರೂವಾರಿ ಸಿ.ಎಂ. ಸಿದ್ದರಾಮಯ್ಯನವರೇ ಆಗಿದ್ದಾರೆ. ಈ ಸಂದರ್ಭದಲ್ಲಿ ಪಂಚಮಸಾಲಿ ಸಮುದಾಯದ ವಕೀಲರ ಮೇಲೆ ಹಾಗೂ ರೈತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಸರ್ಕಾರದ ಧೋರಣೆ ಸರಿಯಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟಿಸಿ ಹಕ್ಕು ಕೇಳುವುದು ಪ್ರತಿಯೊಬ್ಬರ ಆಧ್ಯ ಕರ್ತವ್ಯ ಅದು ಜನ ವಿರೋಧಿ ಎಂದು ಹೇಳಿಕೆ ನೀಡಿದ್ದು ಖಂಡಿನಿಯವಾಗಿದೆ ಎಂದರು.

- Advertisement -

ದಾನಪ್ಪಗೌಡ ಚೆನ್ನಗೊಂಡ ವಕೀಲರು ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅನ್ಯಾಯಕ್ಕೊಳಪಟ್ಟ ವ್ಯಕ್ತಿ ಸರಕಾರಕ್ಕೆ ಸೌಲಭ್ಯ ಕೇಳುವುದು ಸರ್ವೆ ಸಾಮಾನ್ಯ ಅದನ್ನು ಸಿಎಂ ಸಿದ್ದರಾಮಯ್ಯ ಜನವಿರೋಧಿ ಎಂದು ಹೇಳಿಕೆ ನೀಡಿದ್ದು ಖೇದಕರ ಸಂಗತಿಯಾಗಿದೆ ಸ್ವತಃ ಲಾಠಿ ಹಿಡಿದುಕೊಂಡು ಸ್ವ ಹಿತಾಸಕ್ತಿ ತೋರಿ ಪಂಚಮಸಾಲಿಗಳ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಪೊಲೀಸ್ ಮಹಾ ನಿರ್ದೇಶಕ (ಎಡಿಜಿಪಿ) ಆರ್.ಹಿತೇಂದ್ರ ರವರನ್ನು ಕೂಡಲೇ ಸೇವೆಯಿಂದ ವಜಾ ಗೊಳಿಸಬೇಕು. ಈ ಗೂಂಡಾವರ್ತನೆ ಸರಕಾರ ಮತ್ತು ಸಿದ್ದರಾಮಯ್ಯನವರು ಮುಂದುವರೆಯಲು ಅನರ್ಹರು ಈ ಇಬ್ಬರನ್ನು ಕೂಡಲೇ ವಜಾಗೊಳಿಸಬೇಕೆಂದು ಇಡೀ ಸಮಾಜದ ಪರವಾಗಿ ಮನವಿ ಮಾಡಿಕೊಳ್ಳಲಾಗಿದೆ. ಕೂಡಲೇ ಮುಖ್ಯಮಂತ್ರಿಗಳು ಸಮಾಜದ ಹಾಗೂ ನಮ್ಮ ಜಗದ್ಗುರುಗಳ ಕ್ಷಮೆ ಕೇಳಬೇಕು ಈ ಕುತಂತ್ರ ರಾಜಕಾರಣಕ್ಕೆ ಕಡಿವಾಣ ಹಾಕಬೇಕು. ಅಲ್ಲದೆ ಪಂಚಮಸಾಲಿಗಳ ಹಾಗೂ ರೈತರ ಮೇಲೆ ಹಾಕಿರುವ ಕೇಸ್ ಅನ್ನು ಹಿಂಪಡೆಯಬೇಕು ಇಲ್ಲದಿದ್ದರೆ ಮುಂದಾಗುವ ಅನಾಹುತಗಳಿಗೆ ಸರಕಾರ ಹೋಒಣೆ ಹೊರಬೇಕಾಗುತ್ತದೆ ಎಂದು ಏಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮುತ್ತು ಮನಗೂಳಿ, ಗೋಲ್ಲಾಳಪ್ಪಗೌಡ ಪಾಟೀಲ, ಮಲ್ಲನಗೌಡ ಪಾಟೀಲ ಇಬ್ರಾಹಿಂಪೂರ, ಚಂದ್ರಶೇಖರ ನಾಗರಬೆಟ್ಟ, ಆನಂದ ಶಾಬಾದಿ, ಶ್ರೀಶೈಲ ಯಳಮೇಲಿ, ಬಸವರಾಜ ಐರೋಡಗಿ, ಶ್ರೀಶೈಲ ಚಳ್ಳಗಿ, ಅಶೋಕ ಅಲ್ಲಾಪೂರ, ಮಲ್ಲು ಅಲ್ಲಾಪುರ, ಹರ್ಷವರ್ಧನ ಪೂಜಾರಿ, ಸಂಗಣ್ಣ ಪಾಟೀಲ ಯಂಕಂಚಿ, ಶಿವರಾಜ ಪೋ.ಪಾಟೀಲ, ಪ್ರವೀಣ ಬಿರಾದಾರ ಅಂತರಗಂಗಿ, ರಮೇಶ ಬಿರಾದಾರ, ರಾಮು ಯಳಮೇಲಿ, ಸುರೇಶ ಮಲಗೊಂಡ, ಶಿವು ಬಡಾನೂರ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

- Advertisement -
- Advertisement -

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

  ಅವ ಹಿಂದು ಅವ ಜೈನ ಅವ ಬೌದ್ಧ ಅವ ಸಿಖ್ಖ ಅವ ಕ್ರೈಸ್ತ ಅವ ಮಹಮದೀಯನೆಂದು ದಯಮಾಡಿ ಕರೆಯದಿರು ಬೇರೆಯವರೆನ್ನದಿರು ಅವರು ನಮ್ಮವರೆನ್ನು - ಎಮ್ಮೆತಮ್ಮ ಶಬ್ಧಾರ್ಥ ಮಹಮದೀಯ‌ = ಮುಸಲ್ಮಾನ ತಾತ್ಪರ್ಯ ಜಗತ್ತಿನಲ್ಲಿ‌ ಹಿಂದು‌,...
- Advertisement -

More Articles Like This

- Advertisement -
close
error: Content is protected !!
Join WhatsApp Group