ಅಂಬೇಡ್ಕರ್‌ರವರ ಕನಸು ನನಸಾಗಬೇಕಾದರೆ ಪ್ರತಿಯೊಬ್ಬರು ಶಿಕ್ಷಣವಂತರಾಗಬೇಕು

Must Read

ಸಿಂದಗಿ; ಡಾ. ಬಾಬಾಸಾಹೇಬ ಅಂಬೇಡ್ಕರ್‌ರವರ ಸಿದ್ದಾಂತಗಳು ನಮಗೆ ಇಂದಿಗೂ ಪ್ರೇರಣೆ ಆಗಿವೆ. ಶಿಕ್ಷಣ ಸಂಘಟನೆ ಮತ್ತು ಹೋರಾಟ ಸತತ ನಡೆದರೂ ಮಕ್ಕಳು ಇಂದಿಗೂ ಶಿಕ್ಷಣದಿಂದ ವಂಚಿತರಾಗಿದ್ದಾರೆ ಈ ರೀತಿ ಆದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್‌ರವರ ಕನಸು ನನಸು ಆಗಲು ಸಾಧ್ಯವಿಲ್ಲ. ಅವರ ಕನಸು ನನಸಾಗಬೇಕಾದರೆ ಪ್ರತಿಯೊಬ್ಬರು ಶಿಕ್ಷಣವಂತರಾಗಬೇಕು ಎಂದು ಫಾದರ್ ಸಂತೋಷ ಹೇಳಿದರು.

ಸಿಂದಗಿ ನಗರದಲ್ಲಿರುವ ಸಂಗಮ ಸಂಸ್ಥೆಯಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ೧೩೪ನೇ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ದೇಶದಲ್ಲಿ ನ್ಯಾಯ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಭಾರತದ ಸಂವಿಧಾನ. ಡಾ.ಬಿ ಆರ್ ಅಂಬೇಡ್ಕರರವರು ಸಂವಿಧಾನವನ್ನು ನೀಡದೆ ಹೋಗಿದ್ದರೆ ನಾವು ಯಾರು ಇಲ್ಲಿ ಇರುತಿರಲಿಲ್ಲ. ಅದೇ ರೀತಿ ನಮಗೆ ಅನ್ಯಾಯ ಅದಾಗ ನಮ್ಮ ರಕ್ಷಣೆಗೆ ಬರುವುದು ಡಾ.ಬಾಬಾಸಾಹೇಬ್ ಅಂಬೇಡ್ಕರ್‌ರವರು ರಚಿಸಿರುವ ಕಾನೂನು ಎಂದರು.

ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ನಾಗರತ್ನ ತಿಳಗೂಳ ಮತ್ತು ಮಕ್ಕಳ ಪ್ರತಿನಿಧಿ ಕುಮಾರ ಭಾಗಣ್ಣ ಕುಂಬಾರ ಸೇರಿದಂತೆ ವಿವಿದ ಹಳ್ಳಿಯಿಂದ ಮಕ್ಕಳು, ಪಾಲಕರು ಮತ್ತು ವಿವಿಧ ಸಂಘಟನೆಯ ಮಹಿಳೆಯರು ಉಪಸ್ಥಿತರಿದ್ದರು.

ಮಲಕಪ್ಪ ಹಲಗಿ ನಿರೂಪಿಸಿದರು, ರಾಜೀವ ಕುರಿಮನಿ ಸ್ವಾಗತಿಸಿದರು. ಬಸವರಾಜ್ ಬಿಸನಾಳರವರು ವಂದಿಸಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group