ಡಾ.ವೀರೇಂದ್ರ ಹೆಗ್ಗಡೆ ಅವರ ಜನಪರ ಕಾರ್ಯಕ್ರಮಗಳು ಎಲ್ಲರಿಗೆ ಮಾದರಿಯಾಗಲಿ – ರಾಜು ನಾಯಕ

Must Read

ಹಳ್ಳೂರ – ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾಯೋಜಿತ ಮೂಡಲಗಿ ತಾಲೂಕಿನ ವತಿಯಿಂದ ಹುಣಶ್ಯಾಳ ಪಿಜಿ ಗ್ರಾಮದ ನಮ್ಮೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಅಂಬಿಗರ ತೋಟ -2 ರಲ್ಲಿ ಒಂದರಿಂದ ಐದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಲಸೆ ಕಾರ್ಮಿಕರ ಹಾಗೂ ಕೂಲಿ ಕಾರ್ಮಿಕರ ಮಕ್ಕಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ಒಟ್ಟು 48 ಮಕ್ಕಳಿಗೆ ಸ್ವೆಟರ್ಗಳನ್ನು ವಿತರಿಸಿ ಸಿಹಿ ಹಂಚಲಾಯಿತು.

ಮೂಡಲಗಿ ತಾಲೂಕಿನ ಯೋಜನಾಧಿಕಾರಿಗಳಾದ ರಾಜು ನಾಯಕ್ ಅವರು ಮಾತನಾಡಿ, ಪೂಜ್ಯರ ಜನಪರ ಕಾರ್ಯಕ್ರಮಗಳ ವಿವರಿಸಿ ಅವುಗಳ ಪ್ರಯೋಜನ ಪಡೆದುಕೊಳ್ಳಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್ (ರಿ.) ಅಥಣಿ ವೇದಿಕೆಯ ಸದಸ್ಯರಾದ ಉದಯ ಗೌಡ, ಶಾಲೆಯ ಮುಖ್ಯೋಪಾಧ್ಯಾಯರಾದ ನಾಗರಾಜ ಕಾಟವಿ, ಶಿಕ್ಷಕರಾದ ಹಣಮಂತ ಕಟ್ಟಿಮನಿ, ಜ್ಞಾನವಿಕಾಸ ಸಮನ್ವಯ ಅಧಿಕಾರಿಯಾದ ಶ್ರೀಮತಿ ವಿಜಯಲಕ್ಷ್ಮಿ, ವಲಯದ ಮೇಲ್ವಿಚಾರಕರಾದ ಶ್ರೀಮತಿ ಮಂಜುಳಾ , ಸೇವಾ ಪ್ರತಿನಿಧಿಗಳು ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶಿಕ್ಷಕರಾದ ಹನುಮಂತ ಕಟ್ಟಿಮನಿಯವರು ನಿರೂಪಿಸಿ ವಂದಿಸಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group