Homeಸುದ್ದಿಗಳು26 ರಂದು ದಸಂಸ ಸದಸ್ಯರ ಸಭೆ

26 ರಂದು ದಸಂಸ ಸದಸ್ಯರ ಸಭೆ

ಸಿಂದಗಿ: 26 ಶನಿವಾರ ಬೆಳಿಗ್ಗೆ 10-00 ಗಂಟೆಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ನಾಗವಾರಬಣ) ಸಿಂದಗಿ ತಾಲೂಕ ಶಾಖೆಯ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಸಂಘಟನೆಯ ಬಲಪಡಿಸುವ ಸಲುವಾಗಿ ಹಾಗೂ ಇನ್ನಿತರ ಕಾರ್ಯ ವೈಖರಿಗಳ ಬಗ್ಗೆ ಚರ್ಚಿಸುವ ಸಲುವಾಗಿ ನಗರದ ಪ್ರವಾಸಿ ಮಂದಿರದಲ್ಲಿ ಸಭೆ ಕರೆಯಲಾಗಿದೆ ಎಂದು ಜಿಲ್ಲಾ ಸಂಚಾಲಕ ಚಂದ್ರಕಾಂತ ಸಿಂಗೆ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಸಭೆಯಲ್ಲಿ ಸಂಚಾಲಕರಾದ ಗುರುರಾಜ ಗುಡಿಮನಿ, ಹುಯೋಗಿ ತಲ್ಲೋಳ್ಳಿ ಸಂತೋಷ ತಳಕೇರಿ, ಜಿಲ್ಲಾ ವಿದ್ಯಾರ್ಥಿ ಒಕ್ಕೂಟದ ಸಂಚಾಲಕ ನಾಗೇಶ ಕಟ್ಟಿಮನಿ, ಹಾಗೂ ಎಲ್ಲಾ ಪದಾಧಿಕಾರಿಗಳು ಭಾಗವಹಿಸುವವರು ಕಾರಣ ತಾಲೂಕಿನ ಎಲ್ಲ ದಲಿತ ಸಂಘರ್ಷ ಸಮಿತಿಯ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಿ ಚರ್ಚೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

RELATED ARTICLES

Most Popular

error: Content is protected !!
Join WhatsApp Group