ರಾಷ್ಟ್ರಕವಿ ಕುವೆಂಪು ಸಾಹಿತ್ಯೋತ್ಸವದಲ್ಲಿ ಪರಿಸರ ಸಂರಕ್ಷಣಾ ಪ್ರತಿಜ್ಞೆ

Must Read

ಮೈಸೂರು – ಗ್ರಾಮಾಂತರ ಬುದ್ಧಿಜೀವಿಗಳ ಬಳಗವು ಮೈಸೂರಿನಲ್ಲಿ ನಡೆಸಿದ ರಾಷ್ಟ್ರಕವಿ ಕುವೆಂಪು ಸಾಹಿತ್ಯೋತ್ಸವದಲ್ಲಿ ಹಿರಿಯ ಸಾಹಿತಿ ಡಾ.ಭೇರ್ಯ ರಾಮ ಕುಮಾರ್ ಅವರು ಸಮಾರಂಭದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಸಾಹಿತ್ಯ ಪ್ರೇಮಿಗಳಿಗೆ ಪರಿಸರ ಸಂರಕ್ಷಣಾ ಪ್ರತಿಜ್ಞೆ ಬೋಧಿಸಿದರು.

ನಾನು ನನ್ನ ಜನ್ಮದಿನದಂದು ನನ್ನ ತಂದೆ ತಾಯಿಯ ಜನ್ಮದಿನದಂದು , ವಿವಾಹ ವಾರ್ಷಿಕೋತ್ಸವದಂದು,ಹಿರಿಯರ ನೆನಪಿನಲ್ಲಿ ,ಸಹೋದರ ಸಹೋದರಿಯರ ಹೆಸರಿನಲ್ಲಿ ಪ್ರತಿ ವರ್ಷವೂ ಒಂದೊಂದು ಸಸಿಯನ್ನು ನೆಟ್ಟು ಪೋಷಿಸುವುದಾಗಿ ಸಾಹಿತಿ ಭೇರ್ಯ ರಾಮಕುಮಾರ್ ಪ್ರತಿಜ್ಞಾವಿಧಿ ಬೋಧಿಸಿದರು.

ಸಭೆಯಲ್ಲಿ ಪಾಲ್ಗೊಂಡಿದ್ದ ಇನ್ನೂರಕ್ಕೂ ಹೆಚ್ಚು ಸಾಹಿತ್ಯಾಭಿಮಾನಿಗಳು ಪರಿಸರ ಸಂರಕ್ಷಣೆ ಮಾಡುವುದಾಗಿ ಪ್ರತಿಜ್ಞೆ ಸ್ವೀಕರಿಸಿದರು.

ಗ್ರಾಮಾಂತರ ಬುದ್ಧಿ%ಜೀವಿಗಳ ಬಳಗದ ವತಿಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸುಮಾರು ಇನ್ನೂರಕ್ಕೂ ಹೆಚ್ಚು ಜನರಿಗೆ ಉಚಿತವಾಗಿ ಸಸಿಗಳನ್ನು ವಿತರಿಸಲಾಯಿತು.1985 ರಿಂದ ಇಲ್ಲಿಯವರೆಗೆ ಸುಮಾರು ಹನ್ನೊಂದು ಸಾವಿರ ಸಸಿಗಳನ್ನು ವಿತರಿಸಲಾಗಿದೆ.ಇದೊಂದು ಶ್ಲಾಘನೀಯ ಕಾರ್ಯ ಎಂದು ಹಿರಿಯ ಸಾಹಿತಿಗಳಾದ ಡಾ. ಸಿಪಿಕೆ ಅವರು ಶ್ಲಾಘಿಸಿದರು

Latest News

ಸರಕಾರಿ ಶಾಲೆಗೆ ೫೧ ಸಾವಿರ ಮೌಲ್ಯದ ಸೌಂಡ ಸಿಸ್ಟಮ್ ಕಾಣಿಕೆ

ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಗೆ ರೂ.೫೧,೦೦೦/ ಬೆಲೆಯ ಸೌಂಡ್ ಸಿಸ್ಟಮ್, ಮೈಕ್, ಸೌಂಡ ಬಾಕ್ಸನ್ನು ಗ್ರಾಮದ ಗುತ್ತಿಗೆದಾರ ಮಂಜುನಾಥ...

More Articles Like This

error: Content is protected !!
Join WhatsApp Group