ಬಸವಕಲ್ಯಾಣದಲ್ಲಿ ಶೀಘ್ರದಲ್ಲೇ ಅನುಭವ ಮಂಟಪ

Must Read

ಬೀದರ – ಶೀಘ್ರದಲ್ಲೇ ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ಕಾಮಗಾರಿ ಆರಂಭ ಮಾಡಲಾಗುವುದು ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಭರವಸೆ ನೀಡಿದ್ದಾರೆ.

ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಬೀದರ್ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಜೊತೆ ವರ್ಚುವಲ್ ಸಭೆ ನಡೆಸಿದ್ದರು. ಈ ವೇಳೆ ಸಭೆಯಲ್ಲಿ ಭಾಗಿಯಾಗಿದ್ದ ಸಚಿವ ಪ್ರಭು ಚವ್ಹಾಣ್ ಕಲ್ಯಾಣ ಕರ್ನಾಟಕ ಭಾಗದ ಬೀದರ್ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು.

ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ಕಾಮಗಾರಿಗೆ ಸಿಎಂ ಬಿಎಸ್ ವೈ ಶಂಕುಸ್ಥಾಪನೆ ಮಾಡಿದ್ದು, ಈಗಾಗಲೇ 200 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಸದ್ಯ ರಾಜ್ಯದಲ್ಲಿ ಮುಂಗಾರು ಮಳೆ ಹೆಚ್ಚಾಗಿದ್ದರಿಂದ ಕಾಮಗಾರಿಗೆ ವಿಳಂಬವಾಗಿದ್ದು ಮುಂದಿನ ಎರಡು ತಿಂಗಳಲ್ಲಿ ಕಾಮಗಾರಿ ಆರಂಭಮಾಡುವುದಾಗಿ ಭರವಸೆ ನೀಡಿದರು.

ಬಳಿಕ ಬಸವಕಲ್ಯಾಣ ನಗರದ ತಾಲ್ಲೂಕು ಪಂಚಾಯಿತಿಯ ಸಭಾಂಗಣದಲ್ಲಿ ಸಚಿವರಾದ ಪ್ರಭು ಚವ್ಹಾಣ ಅವರು ತಾಲ್ಲೂಕಿನ ಅಧಿಕಾರಿಗಳ ಜೊತೆ ಸಭೆ ನಡೆಸಿ ಬಸವಕಲ್ಯಾಣದ ಕುಂದು ಕೊರತೆಗಳ ಬಗ್ಗೆ ಚರ್ಚೆ ನಡೆಸಿದರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group