spot_img
spot_img

ಗ್ರಾಮ ಸಹಾಯಕರಿಂದ ತಹಶೀಲ್ದಾರ ರಿಗೆ ಮನವಿ

Must Read

spot_img
- Advertisement -

ಮೂಡಲಗಿ: ಸುಮಾರು 43 ವರ್ಷಗಳ ಬೇಡಿಕೆಯನ್ನು ಈಡೇರಿಸಿಕೊಳ್ಳಲು ಸೆ. 22ರಂದು ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಅನಿರ್ದಿಷ್ಟ ಅವಧಿಯ ಮುಷ್ಕರವನ್ನು ರಾಜ್ಯ ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘವು ಕರೆ ಕೊಟ್ಟ ಹಿನ್ನೆಲೆಯಲ್ಲಿ ನಮ್ಮನ್ನು ಕೇಂದ್ರ ಸ್ಥಾನದಿಂದ ಬಿಡಲು ನಮಗೆ ಅನುಮತಿ ನೀಡಬೇಕೆಂದು ಇಲ್ಲಿನ ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘದ ಪದಾಧಿಕಾರಿಗಳು ತಹಸೀಲ್ದಾರ ಡಿ.ಜಿ.ಮಹಾತ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ರಾಜ್ಯದ 10450 ಗ್ರಾಮ ಸಹಾಯಕರು ಕಡ್ಡಾಯವಾಗಿ ಈ ಮುಷ್ಕರದಲ್ಲಿ ಭಾಗವಹಿಸಲು ರಾಜ್ಯ ಸಂಘದ ನಿರ್ದೇಶನ ಹಾಗೂ ಆದೇಶವಿರುವುದರಿಂದ ನಾವೂ ಕೂಡ ಈ ಮುಷ್ಕರದಲ್ಲಿ ಭಾಗವಹಿಸಬೇಕಾಗಿರುವುದರಿಂದ ನಾವು ಕಾರ್ಯ ನಿರ್ವಹಿಸುವ ಕೇಂದ್ರ ಸ್ಥಾನ ಬಿಡಲು ಅನುಮತಿ ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘದ ಅಧ್ಯಕ್ಷ ಭೀಮಶಿ ಸೊರಗಾಂವಿ, ಉಪಾಧ್ಯಕ್ಷ ಬೀರಪ್ಪ ಮೆನಸಪ್ಪಗೋಳ, ಅರ್ಬಣ್ಣ ತಳವಾರ, ಮಾರುತಿ ಮಂಡರ, ಹಸನ ಡೊಂಗ್ರೆ, ಅಡಿವೆಪ್ಪ ಹಡಿಗಿನಾಳ, ವಿಠ್ಠಲ ತಳವಾರ, ಲಾಲಸಾಬ ಸಯ್ಯದ, ಉಮೇಶ ಕಂದಿ, ಮಲ್ಲೇಶ ತಳವಾರ, ಗೋವಿಂದ ಗೋಪಾಳಿ ಇದ್ದರು.

- Advertisement -
- Advertisement -

Latest News

ಯೋಗ ಸ್ಪರ್ಧಾ ವಿಜೇತರಿಗೆ ಕಡಾಡಿ ಸನ್ಮಾನ

ಮೂಡಲಗಿ: ಗ್ರಾಮೀಣ ಪ್ರದೇಶದ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಯೋಗದಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ ಇಂತಹ ಪ್ರತಿಭೆಗಳು ಬೆಳಕಿಗೆ ಬಂದು ನಾಡಿನ...
- Advertisement -

More Articles Like This

- Advertisement -
close
error: Content is protected !!
Join WhatsApp Group