ಮೂಡಲಗಿಯಲ್ಲಿ ಸಬ್ ರಜಿಸ್ಟ್ರರ್ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ: ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ

Must Read

ಮೂಡಲಗಿ: ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹು ನಿರೀಕ್ಷೆಯ ಉಪ ನೋಂದಣಾಧಿಕಾರಿಗಳ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ಮೂಡಲಗಿಯಲ್ಲಿ ಹೊಸದಾಗಿ ಉಪನೋಂದಣಾಧಿಕಾರಿಗಳ ಕಛೇರಿಯನ್ನು ಫೆಬ್ರುವರಿ ತಿಂಗಳೊಳಗೆ ಆರಂಭಿಸಲಾಗುವುದು ಎಂದು ಅವರು ಹೇಳಿದರು.

ಸತತವಾಗಿ ಎರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯು ನಮ್ಮ ಪ್ರಸ್ತಾವಣೆಯನ್ನು ವಿಳಂಬ ಮಾಡಿತ್ತು. ಆದರೂ ಹಲವು ಬಾರಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮೂಡಲಗಿಯಲ್ಲಿ ಪ್ರಸ್ತಾವನೆ ಹಂತದಲ್ಲಿರುವ ಉಪನೋಂದಣಾಧಿಕಾರಿಗಳ ಕಛೇರಿ ಆರಂಭಕ್ಕೆ ಮಂಜೂರಾತಿ ನೀಡುವಂತೆ ಕೋರಲಾಗಿತ್ತು. ನಮ್ಮ ಮನವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿ, ಹಣಕಾಸು ಇಲಾಖೆಯಿಂದ ಅನುಮೋದನೆ ನೀಡಿ, ಕಛೇರಿ ಆರಂಭಕ್ಕೆ ಕ್ರಮ ಕೈಗೊಂಡಿದ್ದಾರೆ. ಹಣಕಾಸು ಇಲಾಖೆಯಿಂದ ಕಂದಾಯ ಇಲಾಖೆಗೆ ಪ್ರಸ್ತಾವನೆಯು ನಿನ್ನೆ ಸೋಮವಾರದಂದು ಸಲ್ಲಿಕೆಯಾಗಿದೆ ಎಂದು ಹೇಳಿದರು.

ಹೊಸದಾಗಿ ಮೂಡಲಗಿಯಲ್ಲಿ ಆರಂಭವಾಗಲಿರುವ ಈ ಕಛೇರಿಯಲ್ಲಿ ತಾಲೂಕಿನ ಎಲ್ಲ 48 ಗ್ರಾಮಗಳು ಸೇರ್ಪಡೆಯಾಗಲಿವೆ. ಬರುವ ಫೆಬ್ರುವರಿ ತಿಂಗಳಲ್ಲಿ ಉಪ ನೋಂದಣಾಧಿಕಾರಿಗಳ ಕಛೇರಿಯನ್ನು ಪ್ರಾರಂಭಿಸಲಾಗುವುದು. ಮೂಡಲಗಿ ತಹಶೀಲ್ದಾರ ಕಛೇರಿ ಹತ್ತಿರ ಉಪನೋಂದಣಾಧಿಕಾರಿಗಳ ಕಛೇರಿ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದೆ. ಈ ಕಛೇರಿಗೆ ಹೊಸದಾಗಿ ಉಪನೋಂದಣಾಧಿಕಾರಿ, ದ್ವಿತೀಯ ದರ್ಜೆ ಸಹಾಯಕ, ಡೇಟಾ ಎಂಟ್ರಿ ಆಪರೇಟರ್ ಮತ್ತು ಗ್ರುಪ್- ಡಿ ಹುದ್ದೆಗಳನ್ನು ಈ ಕಛೇರಿಗೆ ಸೃಷ್ಟಿಸಲಾಗಿದೆ. ಈ ಮೂಲಕ ಮೂಡಲಗಿ ತಾಲೂಕಿನ ನಾಗರಿಕರ ಬಹುದಿನಗಳ ಕನಸು ಈಡೇರಿದಂತಾಗಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group