Homeಸುದ್ದಿಗಳುಸಿಂದಗಿ ನಗರಕ್ಕೆ ಅರುಣಸಿಂಗ್

ಸಿಂದಗಿ ನಗರಕ್ಕೆ ಅರುಣಸಿಂಗ್

ಸಿಂದಗಿ: ನಗರಕ್ಕೆ ಅ.08 ರಂದು ಮಧ್ಯಾಹ್ನ — 3 ಗಂಟೆಗೆ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಉಸ್ತುವಾರಿ ಅರುಣಸಿಂಗ್ ಹಾಗೂ ರಾಜ್ಯ ಕಾರ್ಯದರ್ಶಿ ಸಿದ್ದರಾಜು ಅವರು ಬ್ರಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲು ಆಗಮಿಸಲಿದ್ದಾರೆ ಅದರ ನಿಮಿತ್ತ ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.

ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 271 ಭೂತ್, 10 ಮಹಾಶಕ್ತಿ, 70 ಶಕ್ತಿ ಕೇಂದ್ರ, ಹಾಲಿ ಹಾಗೂ ಮಾಜಿ ಜಿಪಂ.ತಾಪಂ, ಪುರಸಭೆ ಸದಸ್ಯರು, 271 ಬಿಪಿಎಲ್‍ಗಳು 10 ಪೇಜ್ ಪ್ರಮುಖರು ಸೇರಿದಂತೆ 5 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳಲಿದ್ದು ಕಾರಣ   ಕೇಂದ್ರ ಹಾಗೂ ರಾಜ್ಯದ ವಿವಿಧ ಯೋಜನೆಗಳ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಇದರ ಲಾಭ ಪಡೆದುಕೊಳ್ಳಬೇಕು ಎಂದರು.

ಮಂಡಲ ಅಧ್ಯಕ್ಷರಾದ ಈರಣ್ಣ ರಾವುರ, ಮಾಜಿ ಲಿಂಬೆ ಅಭಿವೃದ್ಧಿ ಮಂಡಳಿ ಅದ್ಯಕ್ಷ ಅಶೋಕ ಅಲ್ಲಾಪುರ, ಸಿದ್ದರಾಮ ಪಾಟೀಲ ಜಿಲ್ಲಾ ಉಪಾಧ್ಯಕ್ಷ ರಾಜಶೇಖರ ಪೂಜಾರ, ಶಿವಕುಮಾರ ಬಿರಾದಾರ ಇದ್ದರು.

RELATED ARTICLES

Most Popular

error: Content is protected !!
Join WhatsApp Group