spot_img
spot_img

Ashok Managooli: ಮನಗೂಳಿ ಆಸ್ಪತ್ರೆಯಲ್ಲಿ ರಾಷ್ಟ್ರೀಯ ವೈದ್ಯರ ದಿನ ಆಚರಣೆ

Must Read

spot_img
- Advertisement -

ಸಿಂದಗಿ: ವೈದಕೀಯ ವೃತ್ತಿ ಇದೊಂದು ಸೇವಾ ವೃತ್ತಿ ಅಲ್ಲದೆ ಸಾಮಾಜಿಕ ಸೇವಾವೃತ್ತಿಯಾಗಿದ್ದು ರೋಗಿಗಳಿಗೆ ಉತ್ತಮವಾದ ಚಿಕಿತ್ಸೆ ಹಾಗೂ ಫಲಕಾರಿಯಾದ ಆತ್ಮಸ್ಥೈರ್ಯ, ಧೈರ್ಯ ತುಂಬುವ  ಡಾಕ್ಟರ ವೃತ್ತಿಯಾಗಿದೆ. ವೈದ್ಯರ ದಿನ ಕಾರ್ಯಕ್ರಮ ಒಂದೇ ವರ್ಷಕ್ಕೆ ಸೀಮಿತವಾಗದೇ ಪ್ರತಿ ವರ್ಷ ಇಂಥ ಶಿಬಿರಗಳನ್ನು ಹಮ್ಮಿಕೊಳ್ಳಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ಪಟ್ಟಣದ ಮನಗೂಳಿ ಆಸ್ಪತ್ರೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯ ಪ್ರಯಕ್ತ ಬೆಂಗಳೂರು ಸಪ್ತಗಿರಿ ಆಸ್ಪತ್ರೆಯ ಸಹಯೋಗದಲ್ಲಿ ವಿವಿಧ ರೋಗಗಳಿಂದ ಬಳಲುತ್ತಿರುವ ಜನರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಡಾ. ಬಿ.ಸಿ.ರಾಯ್ ಅವರ ನೆನಪಿಗಾಗಿ ಪ್ರತಿವರ್ಷ ಜುಲೈ 1 ರಂದು ಆಚರಿಸಲಾಗುತ್ತಿರುವ ರಾಷ್ಟ್ರೀಯ ವೈದ್ಯರ ದಿನದಂದು ಇಡೀ ಮತ ಕ್ಷೇತ್ರದ ಜನತೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡಿರುವ ಮನಗೂಳಿ ಆಸ್ಪತ್ರೆಯ ಎಲ್ಲ ಸಿಬ್ಬಂದಿಯ ಕಾರ್ಯ ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ಶಾಸಕ ಅಶೋಕ ಮನಗೂಳಿಯವರು ಕೇಕ್ ಕಟ್ ಮಾಡುವ ಮೂಲಕ ಶಿಬಿರ ಉದ್ಘಾಟಿಸಿ, ಡಾ. ಶಾಂತವೀರ ಮನಗೂಳಿ, ಡಾ ಸಂಧ್ಯಾ ಮನಗೂಳಿ ಡಾಕ್ಟರ ದಂಪತಿಗಳಿಗೆ ಕೇಕ್ ತಿನ್ನಿಸಿ ಶುಭ ಕೋರಿದರು. 

- Advertisement -

ಪಟ್ಟಣದ ಟಿಎಸ್‍ಪಿಎಂ ಆಯುರ್ವೇದಿಕ ಮೆಡಿಕಲ್ ಕಾಲೇಜು ವೈದ್ಯರು ಹಾಗೂ ಬೆಂಗಳೂರಿನ ಎಚ್.ಸಿ.ಜಿ ಆಸ್ಪತ್ರೆಯ ವೈದ್ಯರು ಇದ್ದರು.

- Advertisement -
- Advertisement -

Latest News

ಹನಿಗವನಗಳು

ಹನಿಗವನಗಳು 1) ಸುಳ್ಳುಗಾರರು ಹತ್ತು ನಾಲಿಗೆಯ ರಾವಣ ಹೇಳಲಿಲ್ಲ ಒಂದು ಸುಳ್ಳು ಒಂದೇ ನಾಲಿಗೆಯ ರಾಜಕಾರಣಿ ಹೇಳುತ್ತಾನೆ ದಿನಕ್ಕತ್ತು ಸುಳ್ಳು! 2) ಶೀಲಾ ನೆರೆಮನೆ ಶೀಲಾ ಪರ ಪುರುಷರೊಡನೆ ಸೇರಿ ಹೆಸರು ಕೆಡಿಸಿಕೊಂಡಳು 3) ಟಿವಿ ಹಾವಳಿ ಮನೆಯಲ್ಲಿ ಟಿವಿ ಮುಂದೆ ಸದಾ ಇರುವ ವಿದ್ಯಾ ರ್ಥಿಗಳು ಶಾಲೆಯಲ್ಲಿ ಹಿಂದೆ ಬೀಳುವರು. 4) ವಾಸ್ತವ ಕಟ್ಟುವವು...
- Advertisement -

More Articles Like This

- Advertisement -
close
error: Content is protected !!
Join WhatsApp Group