Ashok Managooli: ಮನಗೂಳಿ ಆಸ್ಪತ್ರೆಯಲ್ಲಿ ರಾಷ್ಟ್ರೀಯ ವೈದ್ಯರ ದಿನ ಆಚರಣೆ

Must Read

ಸಿಂದಗಿ: ವೈದಕೀಯ ವೃತ್ತಿ ಇದೊಂದು ಸೇವಾ ವೃತ್ತಿ ಅಲ್ಲದೆ ಸಾಮಾಜಿಕ ಸೇವಾವೃತ್ತಿಯಾಗಿದ್ದು ರೋಗಿಗಳಿಗೆ ಉತ್ತಮವಾದ ಚಿಕಿತ್ಸೆ ಹಾಗೂ ಫಲಕಾರಿಯಾದ ಆತ್ಮಸ್ಥೈರ್ಯ, ಧೈರ್ಯ ತುಂಬುವ  ಡಾಕ್ಟರ ವೃತ್ತಿಯಾಗಿದೆ. ವೈದ್ಯರ ದಿನ ಕಾರ್ಯಕ್ರಮ ಒಂದೇ ವರ್ಷಕ್ಕೆ ಸೀಮಿತವಾಗದೇ ಪ್ರತಿ ವರ್ಷ ಇಂಥ ಶಿಬಿರಗಳನ್ನು ಹಮ್ಮಿಕೊಳ್ಳಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ಪಟ್ಟಣದ ಮನಗೂಳಿ ಆಸ್ಪತ್ರೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯ ಪ್ರಯಕ್ತ ಬೆಂಗಳೂರು ಸಪ್ತಗಿರಿ ಆಸ್ಪತ್ರೆಯ ಸಹಯೋಗದಲ್ಲಿ ವಿವಿಧ ರೋಗಗಳಿಂದ ಬಳಲುತ್ತಿರುವ ಜನರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಡಾ. ಬಿ.ಸಿ.ರಾಯ್ ಅವರ ನೆನಪಿಗಾಗಿ ಪ್ರತಿವರ್ಷ ಜುಲೈ 1 ರಂದು ಆಚರಿಸಲಾಗುತ್ತಿರುವ ರಾಷ್ಟ್ರೀಯ ವೈದ್ಯರ ದಿನದಂದು ಇಡೀ ಮತ ಕ್ಷೇತ್ರದ ಜನತೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡಿರುವ ಮನಗೂಳಿ ಆಸ್ಪತ್ರೆಯ ಎಲ್ಲ ಸಿಬ್ಬಂದಿಯ ಕಾರ್ಯ ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ಶಾಸಕ ಅಶೋಕ ಮನಗೂಳಿಯವರು ಕೇಕ್ ಕಟ್ ಮಾಡುವ ಮೂಲಕ ಶಿಬಿರ ಉದ್ಘಾಟಿಸಿ, ಡಾ. ಶಾಂತವೀರ ಮನಗೂಳಿ, ಡಾ ಸಂಧ್ಯಾ ಮನಗೂಳಿ ಡಾಕ್ಟರ ದಂಪತಿಗಳಿಗೆ ಕೇಕ್ ತಿನ್ನಿಸಿ ಶುಭ ಕೋರಿದರು. 

ಪಟ್ಟಣದ ಟಿಎಸ್‍ಪಿಎಂ ಆಯುರ್ವೇದಿಕ ಮೆಡಿಕಲ್ ಕಾಲೇಜು ವೈದ್ಯರು ಹಾಗೂ ಬೆಂಗಳೂರಿನ ಎಚ್.ಸಿ.ಜಿ ಆಸ್ಪತ್ರೆಯ ವೈದ್ಯರು ಇದ್ದರು.

Latest News

ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸಂವಿಧಾನವೇ ಆಧಾರ – ಈರಣ್ಣ ಕಡಾಡಿ

ಮೂಡಲಗಿ: ಬಲಿಷ್ಠ ಪ್ರಜಾಪ್ರಭುತ್ವ ಮೌಲ್ಯಗಳಿಗೆ ನಮ್ಮ ದೇಶದ ಶ್ರೇಷ್ಟ ಸಂವಿಧಾನವೇ ಆಧಾರ ಸ್ತಂಭವಾಗಿದೆ. ಪವಿತ್ರ ಸಂವಿಧಾನದ ಮೌಲ್ಯಗಳನ್ನು ಸದಾ ಪಾಲಿಸುವ ಜೊತೆಗೆ ದೇಶದ ಏಕತೆ, ವೈವಿಧ್ಯತೆ...

More Articles Like This

error: Content is protected !!
Join WhatsApp Group