ಲೇಖಕಿ ಡಾ.ರತ್ನಾ ನಾಗರಾಜುರವರ “ಭವ ಪ್ರೇಮ” ಕಥಾ ಸಂಕಲನ ಲೋಕಾರ್ಪಣೆ ಮತ್ತು ‘ಉಕ್ಕಿನ ಮಹಿಳೆ’ ಪ್ರಶಸ್ತಿ ಪ್ರದಾನ

Must Read

ಬೆಂಗಳೂರು – ನಗರದ ಜೆಪಿ ನಗರದ ವಿಇಟಿ ಕಾಲೇಜು ಸಭಾಂಗಣದಲ್ಲಿ ಲೇಖಕಿ ಡಾ.ರತ್ನಾ ನಾಗರಾಜುರವರ “ಭವ ಪ್ರೇಮ” ಕಥಾ ಸಂಕಲನದ ಲೋಕಾರ್ಪಣೆ ನಡೆಯಿತು . ವೃತ್ತಿಯಿಂದ ಶಿಕ್ಷಣ ಸಂಸ್ಥೆಯೊಂದರಲ್ಲಿ ಅಧಿಕಾರಿಣಿಯಾಗಿ ಸೇವೆಸಲ್ಲಿಸುತ್ತಿರುವ ಲೇಖಕಿ ರತ್ನಾ ನಾಗರಾಜು ಪ್ರವೃತ್ತಿಯಿಂದ ಸಾಹಿತ್ಯಸೇವೆಯಲ್ಲಿ ತೊಡಗಿಸಿಕೊಂಡು ತಮ್ಮ ಛಾಪನ್ನು ಮೂಡಿಸುತ್ತಿದ್ದಾರೆ. ಉತ್ತಮ ಗೃಹಿಣಿಯಾಗಿ , ಜವಾಬ್ದಾರಿಯುತ ಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಹುಮುಖ ಪ್ರತಿಭಾವಂತ ಬರಹಗಾರ್ತಿ ಅನೇಕ ಕೃತಿಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ನೀಡಿದ್ದಾರೆ ಎಂದು ಪ್ರಾಧ್ಯಾಪಕ ಡಾ.ಆರ್ ವಾದಿರಾಜು ಅಭಿಪ್ರಾಯ ಪಟ್ಟರು . ನೇತಾಜಿ ಸುಭಾಷ್ ಚಂದ್ರ ಬೋಸ್ ಸಾಂಸ್ಕೃತಿಕ ಸಂಘದಿಂದ ಕೊಡಮಾಡುವ ‘ ಉಕ್ಕಿನ ಮಹಿಳೆ’(ಉಮ) ಪ್ರಶಸ್ತಿಯನ್ನು ಲೇಖಕಿ ಡಾ.ರತ್ನಾ ನಾಗರಾಜುರವರಿಗೆ ನೀಡಿ ಮಾತನಾಡುತ್ತಿದ್ದರು.

ಆಧ್ಯಾತ್ಮ ಚಿಂತಕ ಪ್ರೊ.ಶ್ರೀಕಂಠ ಎ.ಎಸ್.ಕೃತಿ ಬಿಡುಗಡೆಗೊಳಿಸಿದರು. ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಮಾತನಾಡುತ್ತ, ಕನ್ನಡ ಪತ್ರಿಕೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಶೈಕ್ಷಣಿಕ ಹಾಗೂ ಸಾಹಿತ್ಯೇತರ ಕ್ಷೇತ್ರಗಳ ಹೊರತಾದ ಲೇಖಕರು ಸಾಹಿತ್ಯಾಸಕ್ತರಾಗಿ ಬರೆಯುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲೆ ಡಾ.ಆರ್. ಪಾರ್ವತಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತ, ವ್ಯಕ್ತಿತ್ವ ವಿಕಸನಕ್ಕೆ ಸಾಹಿತ್ಯಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳ ಬೇಕು ಎಂದು ನುಡಿದರು. ಉಪ ಪ್ರಾಂಶುಪಾಲ ಪ್ರೊ. ನಾರಾಯಣಸ್ವಾಮಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಜಗದೀಶ್ ಎನ್. , ರಂಗಸ್ವಾಮಿ ಹೆಚ್.ಟಿ ವೇದಿಕೆಯಲ್ಲಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group